May 7, 2024

Bhavana Tv

Its Your Channel

ವಿಧಾನಪರಿಷತ್ ಅಭ್ಯರ್ಥಿ ಅಪ್ಪಾಜಿ ಗೌಡರ ಗೆಲುವು ಖಚಿತ- ಶಾಸಕ ಸುರೇಶ್ ಗೌಡ

ನಾಗಮಂಗಲ: ಡಿಸೆಂಬರ್ ೧೦ ನೇ ತಾರೀಕು ನಡೆಯುವ ವಿಧಾನಪರಿಷತ್ ಚುನಾವಣೆಗೆ ಜಾತ್ಯಾತೀತ ಜನತಾದಳದ ಅಭ್ಯರ್ಥಿಯಾಗಿ ಅಪ್ಪಾಜಿಗೌಡ ರವರ ಸ್ಪರ್ಧಿಸಿದ್ದು ಇಂದು ಜಾತ್ಯತೀತ ಜನತಾದಳದ ಮುಖಂಡರಾದ ಶಾಸಕ ಸುರೇಶ್ ಗೌಡ ಮಾಜಿ ಸಂಸದ ಶಿವರಾಮೇಗೌಡ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಗೂ ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್. ನಾಗಮಂಗಲ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಮತ್ತು ಪುರಸಭೆ ಸದಸ್ಯರುಗಳನ್ನು ಸಂಪರ್ಕಿಸಿ ಅತಿ ಹೆಚ್ಚು ಮತಗಳ ಅಂತರದಿoದ ನಮ್ಮ ಅಭ್ಯರ್ಥಿಯಾದ ಅಪ್ಪಾಜಿ ಗೌಡರನ್ನು ಗೆಲ್ಲಿಸಬೇಕೆಂದು ಜೆಡಿಎಸ್ ಮುಖಂಡರುಗಳು ಮನವಿ ಮಾಡಿದರು

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್ ಗೌಡ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಜೆಡಿಎಸ್ ನ ಪ್ರಾಬಲ್ಯವಿದೆ ಎಲ್ಲರ ಸಹಕಾರದೊಂದಿಗೆ ನಮ್ಮ ಅಭ್ಯರ್ಥಿಯಾದ ಅಪ್ಪಾಜಿ ಗೌಡರನ್ನು ವಿಧಾನಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿAದ ಗೆಲ್ಲಿಸಬೇಕೆಂದು ಮನವಿ ಮಾಡಿದರು

ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ ನಮ್ಮ ಎದುರಾಳಿ ಪಕ್ಷದವರು ಹೇಳುವಂತೆ ಮುಂದಿನ ಚುನಾವಣೆ ಈ ಚುನಾವಣೆಯಿಂದ ಹೊಸ ಮನ್ವಂತರ ಪಡೆಯಲಿದೆ ಕುಮಾರಸ್ವಾಮಿಯವರ ಅಭಿವೃದ್ಧಿ ಮಂತ್ರ ದೇವೇಗೌಡ ರವರ ಜನಪಯೋಗಿ ಕೆಲಸಗಳು ಅಭ್ಯರ್ಥಿಯ ಗೆಲುವಿಗೆ ಕಾರಣವಾಗಲಿದೆ ಜೆಡಿಎಸ್ ಮುಖಂಡರು ಒಗ್ಗಟ್ಟಿನ ಮಂತ್ರದಿAದ ಈ ಬಾರಿ ಅತ್ಯಧಿಕ ಹೆಚ್ಚಿನ ಮತಗಳ ಅಂತರದಿAದ ನಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದರು

ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ ಸೋಲುವ ಭೀತಿಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ವಿರೋಧಿಗಳ ಮಾತಿಗೆ ಕಿವಿ ಕೊಡಬೇಡಿ ತಾಲೂಕಿನ ವ್ಯಾಪ್ತಿಯಲ್ಲಿ ಜೆಡಿಎಸ್ ಪ್ರಾಬಲ್ಯದ ಮತದಾರರು ಅತಿಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ನಮ್ಮ ಪಕ್ಷದ ಗೆಲುವು ನಿಶ್ಚಿತವಾಗಿದೆ ಕಳೆದ ಬಾರಿ ನಾನು ಕೂಡ ಚುನಾವಣೆಯಲ್ಲಿ ಅಪ್ಪಾಜಿ ಗೌಡರ ವಿರುದ್ಧ ಸ್ಪರ್ಧಿಸಿದ್ದು ನಿಮಗೆಲ್ಲ ತಿಳಿದ ವಿಚಾರವೇ ನಮ್ಮೆಲ್ಲ ಜೆಡಿಎಸ್ ನಾಯಕರು ಒಗ್ಗಟ್ಟಿನಿಂದ ಅಪ್ಪಾಜಿ ಗೌಡರ ಗೆಲುವಿಗೆ ಶ್ರಮಿಸೋಣ ಎಂದರು.

ವರದಿ: ಚಂದ್ರಮೌಳಿ ನಾಗಮಂಗಲ

error: