ನಾಗಮಂಗಲ :- ನೂತನವಾಗಿ ವಿಧಾನಪರಿಷತ್ ಚುನಾವಣೆಯಲ್ಲಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಗೂಳಿಗೌಡ ರವರು ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ನಡೆಸಿದರು
ಮತದಾರರನ್ನು ಉದ್ದೇಶಿಸಿ ಮಾತನಾಡಿದ ನೂತನ ಸದಸ್ಯ ಗೂಳಿಗೌಡ ರವರು ಪಕ್ಷತೀತವಾಗಿ ಬೆಂಬಲ ನೀಡಿದ ಜಿಲ್ಲೆಯ ಜವಾಬ್ದಾರಿಯುತ ಗ್ರಾಮ ಪಂಚಾಯತಿ ಸದಸ್ಯರು. ಪುರಸಭೆ ಸದಸ್ಯರು. ಮತ್ತು ಪಟ್ಟಣ ಪಂಚಾಯತಿ ಸದಸ್ಯರುಗಳು. ಹಾಗೂ ಜಿಲ್ಲೆಯ ಸಂಸದರಾದ ಸುಮಲತಾ ಅಂಬರೀಶ್ ಮತ್ತು ರೈತ ಸಂಘದವರು ಹಲವಾರು ಮುಖಂಡರು ಪಕ್ಷಾತೀತವಾಗಿ ನನಗೆ ಮತ ನೀಡಿದ್ದಾರೆ ಅವರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುವೆ ಎಂದರು ಮುಂದಿನ ದಿನದಲ್ಲಿ ನಮ್ಮ ನಾಯಕರುಗಳು ಆದೇಶದಂತೆ ಕಾರ್ಯನಿರ್ವಹಿಸುವೆ ಎಂದು ತಿಳಿಸಿದರು
ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮಾತನಾಡಿ ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಪ್ರತಿ ತಾಲೂಕಿಗೂ ತೆರಳಿ ಧನ್ಯವಾದಗಳನ್ನು ತಿಳಿಸಲಾಗುತ್ತಿದೆ ಮುಂದಿನ ದಿನದಲ್ಲಿ ತಾಲೂಕು ಮಟ್ಟದಲ್ಲಿ ಅದ್ದೂರಿ ಕಾರ್ಯಕ್ರಮಗಳನ್ನು ಮಾಡಿ ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದರು
ಕಾರ್ಯಕ್ರಮದಲ್ಲಿ ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಎಚ್ಡಿ ಕೃಷ್ಣೇಗೌಡ ರಾಜೇಗೌಡ ರಾಜೇಶ್ ಹನುಮಂತ ದಿವಾಕರ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು
ವರದಿ: ಚಂದ್ರಮೌಳಿ ನಾಗಮಂಗಲ
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ