May 3, 2024

Bhavana Tv

Its Your Channel

ಎಂ.ಇ.ಎಸ್ ಪುಂಡರನ್ನು ಗಡಿಪಾರಿಗೆ ಆಗ್ರಹಿಸಿ ಸ್ವಾಭಿಮಾನಿ ಕ.ರ.ವೇ.ಪ್ರತಿಭಟನೆ

ನಾಗಮಂಗಲ: ಕನ್ನಡ ಧ್ವಜ ಸುಟ್ಟು ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರನ್ನ ಗಡಿಪಾರುಮಾಡಿ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ನಾಗಮಂಗಲದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ನಾಗಮಂಗಲ ಪಟ್ಟಣದ ಮುಖ್ಯ ರಸ್ತೆ ಟಿ ಮರಿಯಪ್ಪ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ರಾಜ್ಯ ಸರ್ಕಾರ ಮತ್ತು ಭ್ರಷ್ಟ ರಾಜಕೀಯ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ನಮ್ಮದು ನಾಡು ನುಡಿ ವಿಚಾರದಲ್ಲಿ ಎಂಇಎಸ್ ಪುಂಡಾಟಿಕೆ ಸಹಿಸಲಾಗದು ಎಂದು ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಹರೀಶ್ ಗೌಡ ಕಿಡಿಕಾರಿದರು.

ಪ್ರತಿ ಭಟನೆಯಲ್ಲಿ ನೂರಾರುಕರವೇ ಕಾರ್ಯಕರ್ತರು ಪಾಲ್ಗೊಂಡಿದ್ದರು

ವರದಿ: ಚಂದ್ರಮೌಳಿ ನಾಗಮಂಗಲ

error: