May 4, 2024

Bhavana Tv

Its Your Channel

ರಾಜ್ಯ ಸರ್ಕಾರ ದಲಿತರ ಮೀಸಲಾತಿ ಕಿತ್ತುಕೊಳ್ಳುತ್ತಿದೆ – ಮಾಜಿ ಜಿ.ಪಂ ಅಧ್ಯಕ್ಷ ಸುರೇಶ ಕಂಠಿ

ನಾಗಮoಗಲ:- ಮಂಡ್ಯ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ ಸುರೇಶ ಕಂಠಿ ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಆತ್ಮೀಯ ಕಾಂಗ್ರೆಸ್ ಬಂದುಗಳೇ ದಿನಾಂಕ 28/12/2021ರ ಮಂಗಳವಾರದOದು ಮದ್ದೂರು ತಾಲೂಕಿನ ಶಿವಪುರ ಸತ್ಯಾಗ್ರಹ ಸೌಧದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯ ಹಾಗೂ ಜಿಲ್ಲಾಮಟ್ಟದ ನಾಯಕರು ತೀರ್ಮಾನಿಸಲಾಗಿದೆ. ಜಿಲ್ಲೆಯ ಏಳೂ ತಾಲೂಕುಗಳಿಂದ ಕನಿಷ್ಠ ನೂರು ಜನ ಕಾಂಗ್ರೆಸ್ ಮುಖಂಡರು ಭಾಗವಹಿಸಲು ಕೋರಿಕೊಳ್ಳುತ್ತೇನೆ

ಇದೇ ಸಂದರ್ಭದಲ್ಲಿ ಮಾತನಾಡುತ್ತಾ ರಾಜ್ಯ ಸರ್ಕಾರ ಸರ್ಕಾರದ ಇಲಾಖೆಗಳನ್ನು ಖಾಸಗೀಕರಣಗೊಳಿಸುತ್ತ ದಲಿತರ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ತಡೆಹಿಡಿದಿರುವುದು ದುಃಖಕರ ವಿಚಾರವಾಗಿದೆ ಈ ತಕ್ಷಣ ವಿದ್ಯಾರ್ಥಿವೇತನವನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು
ಪತ್ರಿಕಾಗೋಷ್ಠಿಯಲ್ಲಿ ನಾಗಮಂಗಲ ತಾಲೂಕು ಎಸ್ಸಿ.ಎಸ್ಟಿ.ಘಟಕದ ಅಧ್ಯಕ್ಷ ಪ್ರಸನ್ನ. ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಶಿವಣ್ಣ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಾಂಗ್ರೆಸ್ ಮುಖಂಡರಾದ ವಕೀಲ ಚಂದ್ರು.ಲವ. ದೀಪಕ್. ನರಸಿಂಹ. ಶ್ರೀಧರ್. ರಮೇಶ್. ಭಾಗವಹಿಸಿದ್ದರು
ವರದಿ: ಚಂದ್ರಮೌಳಿ ನಾಗಮಂಗಲ

error: