ನಾಗಮಂಗಲ:- ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಖರಡ್ಯ ಬಸವೇಗೌಡ ರವರನ್ನು ಮರುನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕ.ಸ.ಪಾ. ಜಿಲ್ಲಾಧ್ಯಕ್ಷರಾದ ಚಾಮಲಾಪುರ ರವಿಕುಮಾರ್ ಆದೇಶ ಹೊರಡಿಸಿದ್ದಾರೆ
ಈ ಹಿಂದೆ ನಾಗಮಂಗಲ ತಾಲೂಕಿನಲ್ಲಿ ಕ.ಸಾ.ಪ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಬಸವೇಗೌಡ ರವರ ಕಾರ್ಯವೈಖರಿಯನ್ನು ಗುರುತಿಸಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಕ.ಸಾ.ಪ. ಜಿಲ್ಲಾಧ್ಯಕ್ಷರು ಮತ್ತು ರಾಜ್ಯ ಅಧ್ಯಕ್ಷರು ಹಾಗೂ ತಾಲೂಕಿನ ಕನ್ನಡ ಸಾಹಿತ್ಯ ಅಭಿಮಾನಿಗಳು ಸಂಘದ ಪದಾಧಿಕಾರಿಗಳಿಗೆ ಇಂದು ಪಟ್ಟಣದ ಕಚೇರಿಯಲ್ಲಿ ಕೃತಜ್ಞತೆ ಸಲ್ಲಿಸಿದರು
ನೂತನ ಅಧ್ಯಕ್ಷರಾದ ಬಸವೇಗೌಡ ಮಾತನಾಡಿ ತಾಲ್ಲೂಕಿನ ವ್ಯಾಪ್ತಿಯೊಳಗೆ ಸಾಹಿತ್ಯ, ಸಾಂಸ್ಕೃತಿಕಾತ್ಮಕ, ಕವಿಗಳ ಜಯಂತಿಗಳ ಆಚರಣೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಮೂರು ಸಾಹಿತ್ಯ ಸಮ್ಮೇಳನ ಮತ್ತು ಇನ್ನಿತರ ಕಾರ್ಯಕ್ರಮಗಳನ್ನು ರಚಿಸಿ ಅನುಷ್ಠಾನಗೊಳಿಸುವ ಹಾಗೂ ನಾಡು-ನುಡಿ, ನೆಲ-ಜಲ, ಭಾಷೆ, ಗಡಿಗಳಿಗೆ ದಕ್ಕೆ ಉಂಟಾದಾಗ ಅವುಗಳ ರಕ್ಷಣೆ ಮಾಡಲು ಹೋರಾಟ ಮಾಡುವುದರ ಜೊತೆಗೆ ಸಾಹಿತ್ಯ ಪರಿಷತ್ತಿನ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಕನ್ನಡದ ಕೆಲಸವನ್ನು ನಿರ್ವಹಿಸುತ್ತೇನೆ ಎಲ್ಲರ ಸಹಕಾರ ಅತ್ಯಮೂಲ್ಯವಾಗಿದೆ ಎಂದು ತಿಳಿಸಿದರು
ವರದಿ: ಚಂದ್ರಮೌಳಿ ನಾಗಮಂಗಲ
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ