ನಾಗಮಂಗಲ. ನಾಗಮಂಗಲ ಶಾಸಕ ಸುರೇಶ್ ಗೌಡ ರವರ ಹುಟ್ಟುಹಬ್ಬ ಆಚರಣೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿಯವರಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು
ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದ ನಾಗಮಂಗಲ ಜಾತ್ಯಾತೀತ ಜನತಾದಳದ ಅಧ್ಯಕ್ಷರಾದ ಡಿ.ಟಿ. ಶ್ರೀನಿವಾಸಯ್ಯ ಮಾತನಾಡಿ ನಾಗಮಂಗಲ ಶಾಸಕರಾದ ಸುರೇಶ್ ಗೌಡರವರ ಅವಧಿಯಲ್ಲಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿರುತ್ತವೆ ನಮ್ಮೆಲ್ಲರ ಜನಪ್ರಿಯ ನಾಯಕರಾದ ಶಾಸಕರ ಹುಟ್ಟುಹಬ್ಬವನ್ನು ನಮ್ಮ ಆತ್ಮೀಯ ಮುಖಂಡ ಕೆಂಪೇಗೌಡರು ಹತ್ತಾರು ವರ್ಷದಿಂದ ಚಾಚುತಪ್ಪದೇ ಬಡ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ನಡೆಸಿಕೊಂಡು ಬರುತ್ತಿದ್ದಾರೆ ಆದಕಾರಣ ಶಾಸಕ ಸುರೇಶ್ ಗೌಡ ಮತ್ತು ಮುಖಂಡರಾದ ಕೆಂಪೇಗೌಡ ರವರಿಗೆ ಶುಭವಾಗಲಿ ಎಂದು ತಿಳಿಸಿದರು
ಹಣ್ಣು ಹಂಪಲ ವಿತರಣೆ ಕಾರ್ಯಕ್ರಮದಲ್ಲಿ ರಕ್ಷಾ ಕಮಿಟಿ ಸದಸ್ಯರಾದ ಕೆಂಪೇಗೌಡ. ಪುರಸಭೆ ಸದಸ್ಯರಾದ ಚನ್ನಪ್ಪ. ತೆಂಗು ಬೆಳೆಗಾರರ ಸಂಘದ ಉಪಾಧ್ಯಕ್ಷ ನಾಗೇಶ್. ವಕೀಲರಾದ ಪ್ರಕಾಶ್. ಮುದ್ದಣ್ಣ. ಸುರೇಶ್ ಗೌಡ ಅಭಿಮಾನಿಗಳು ಭಾಗವಹಿಸಿದ್ದರು
ವರದಿ: ಚಂದ್ರಮೌಳಿ ನಾಗಮಂಗಲ
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ