May 4, 2024

Bhavana Tv

Its Your Channel

ಪಂಚಾಯತಿ ಕಾರ್ಯಾಲಯದಲ್ಲಿ ಚಾಪೆ ಮೇಲೆ ಮಲಗಿ ಸರಳತೆ ಮೆರೆದ ದಿನೇಶ್ ಗೂಳಿಗೌಡ

ನಾಗಮಂಗಲ. ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ
ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ದೊಡ್ಡಬಾಲ ಹೊನ್ನಾವರ.ಲಾಳನಕೆರೆ. ಕದಬಹಳ್ಳಿ.ಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳ ಜೊತೆ ಪಂಚಾಯತಿ ವ್ಯಾಪ್ತಿಯಲ್ಲಿ ಇರುವಂತಹ ಕುಂದುಕೊರತೆಗಳನ್ನು ಆಲಿಸಿದರು

ಮಂಡ್ಯ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ದಿನೇಶ್ ಗೂಳಿಗೌಡ ಅವರು ತಮ್ಮನ್ನು ಗೆಲ್ಲಿಸಿದಲ್ಲಿ ಮಂಡ್ಯ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ವಾಸ್ತವ್ಯ ಹೂಡುವುದಾಗಿ ವಾಗ್ದಾನ ಮಾಡಿದ್ದರು
ಈ ನಿಮಿತ್ತ ಗುರುವಾರ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಡಿಗನವಿಲೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಗೂಳಿ ಗೌಡರಿಗೆ ಗ್ರಾಮ ಪಂಚಾಯಿತಿ ಸದಸ್ಯರುಗಳು ದೂರಿನ ಸುರಿಮಳೆಗೈದರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುವುದಿಲ್ಲ ಈ ಸ್ವತ್ತು ನಿರ್ವಹಿಸಲು ವಿಳಂಬ ಮಾಡುತ್ತಾರೆ ಕಾಂಗ್ರೆಸ್ ಸದಸ್ಯರ ಕಡೆಗಣನೆ. ಕೆ.ಇ.ಬಿ. ಇಲಾಖೆಯ ಅವ್ಯವಸ್ಥೆ ಕಂದಾಯ ಇಲಾಖೆಯ ಖಾತೆ ವಿಚಾರವಾಗಿ ವಿಳಂಬ. ಜೆ.ಎಂ.ಎA. ಹಾಗೂ ನರೇಗಾ ಯೋಜನೆಯ ಕಾಮಗಾರಿಗಳು ಸಮಸ್ಯೆಗಳ ಕುರಿತು ಚರ್ಚಿಸಿದರು ಸಮಸ್ಯೆಗಳನ್ನು ಆಲಿಸಿದ ವಿಧಾನಪರಿಷತ್ ಸದಸ್ಯ ಗೂಳಿ ಗೌಡರವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಸಮಸ್ಯೆಗಳನ್ನು ಸರಿಪಡಿಸುವಂತೆ ಸೂಚಿಸಿದರು
ಇದೇ ಸಂದರ್ಭದಲ್ಲಿ ಗುಳಕಾಯಿಹೋಸಹಳ್ಳಿ.ಬಿಂಡಿಗನವಿಲೆ. ಹಾಗೂ ಕಂಬದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದರು

ಕಂಬದಹಳ್ಳಿ ಜೈನರ ಮಠಕ್ಕೆ ಭೇಟಿ ನೀಡಿ ಮಠಾಧೀಶರಾದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆಶೀರ್ವಾದ ಪಡೆದರು
ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ರವರು ಮುಂದಿನ ತಿಂಗಳು ಕಂಬದಹಳ್ಳಿ ಗ್ರಾಮದಲ್ಲಿ ಗೊಮ್ಮಟೇಶ್ವರ ಸ್ವಾಮಿಗೆ ಮಹಾಮಸ್ತಾಭಿಷೇಕ ಇರುವುದರಿಂದ ಈ ಕ್ಷೇತ್ರದಲ್ಲಿ ಹಲವಾರು ಕಾಮಗಾರಿಗಳು ಸ್ಥಗಿತಗೊಂಡಿದ್ದು ತ್ವರಿತ ಗತಿಯಲ್ಲಿ ಮುಗಿಸಲು ಸಹಕರಿಸಬೇಕೆಂದು ಕೇಳಿಕೊಂಡರು

ಇದೇ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಗುಳಿಗೌಡ ರವರು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದಿರುವುದರಿAದ ಗ್ರಾಮಗಳ ಸಮಸ್ಯೆಗಳು ತಿಳಿಯುತ್ತವೆ ಗ್ರಾಮ ವಾಸ್ತವ್ಯ ಮಾಡಿದ್ದರಿಂದ ಸ್ಥಳೀಯ ಸಮಸ್ಯೆಗಳನ್ನು ಅರಿಯಬಹುದು ಗ್ರಾಮಗಳ ಅಭಿವೃದ್ಧಿಗೆ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿಯಿಂದ ಕೆಲಸ ನಿರ್ವಹಿಸಬೇಕು ಈ ದಿನ 5 ಪಂಚಾಯಿತಿಯ ಹಲವಾರು ಸಮಸ್ಯೆಗಳನ್ನು ಆಲಿಸಿದ್ದು ಸೂಕ್ತ ಪರಿಹಾರವನ್ನು ಮಾಡುವುದಾಗಿ ಭರವಸೆ ನೀಡಿದರು

ವರದಿ: ಚಂದ್ರಮೌಳಿ ನಾಗಮಂಗಲ

error: