ನವದೆಹಲಿ : ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್ಲಾಕ್ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದ ಸ್ಥಿತಿ ಉತ್ತಮವಾಗಿದೆ. ಪಿಎಂ ಗರಿಬ್ ಆನ್ನ ಯೋಜನೆ ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ 80 ಕೋಟಿ ಜನರಿಗೆ ಪ್ರಯೋಜನಗಳನ್ನು ನೀಡುವ ಈ ಯೋಜನೆ ನವೆಂಬರ್ ವರೆಗೆ ಮುಂದುವರಿಯುತ್ತದೆ ಅಂತ ಹೇಳಿದರು.
ಲಾಕ್ಡೌನ್ ಬೆನ್ನಲ್ಲೇ ಗರೀಬ್ ಕಲ್ಯಾಣ ಯೋಜನೆ ಜಾರಿಗೊಳಿಸಲಾಯಿತು. 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂ. ಜಮೆಯಾಗಿದೆ. 9 ಸಾವಿರಕ್ಕೂ ಹೆಚ್ಚು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಜಮೆ ಮಾಡಲಾಗಿದೆ. ಬಡವರ ಖಾತೆಗಳಿಗೆ 31 ಸಾವಿರ ಕೋಟಿ ರೂ. ಜಮೆಯಾಗಿದೆ ಎಂದು ಹೇಳಿದರು.
ಇದೇ ವೇಳೆ ಲಾಕ್ಡೌನ್ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಮತ್ತೆ ಲಾಕ್ಡೌನ್ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು. ನಾವೆಲ್ಲರೂ ಲಾಕ್ಡೌನ್ ನಿಯಮ ಪಾಲಿಸಿದ್ದೇವೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸಿದ್ದೇವೆ. ಆದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್ ಝೋನ್ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.
More Stories
ಈಜಿಪ್ಟ್ ನಲ್ಲಿ ನಡೆಯಲಿರುವ ಹವಾಮಾನ ವೈಫರೀತ್ಯದ ವಿಶ್ವ ನಾಯಕರ ಸಮಾವೇಶಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ. ದಾಮೋದರ ನಾಯ್ಕ
‘ಖೇಲ್ ರತ್ನ ಪ್ರಶಸ್ತಿ’ಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
NEET-PG ಪರೀಕ್ಷೆ ಕನಿಷ್ಠ ʼ4 ತಿಂಗಳು ಮುಂದೂಡಿಕೆʼ; ಕೇಂದ್ರ ಸರ್ಕಾರ ಘೋಷಣೆ