ಶಿವಮೊಗ್ಗ: ಅಚ್ಚು ಕಟ್ಟು ರೈತರ ಸಮಸ್ಯೆಗಳನ್ನು ಬಗೆ ಹರಿಸಲು ನಮಗೂ ತುಡಿತವಿದೆ. ಆದರೆ, ಅನುದಾನದ ಕೊರತೆ ಕಾಡಾದಲ್ಲಿ ಎದ್ದು ಕಾಣುತ್ತಿದೆ. ಕಳೆದೆರಡು ವರ್ಷದಿಂದ ಕರೋನಾದಂತಹ ಮಹಾ ಮಾರಿಯಿಂದಾಗಿ ನಮ್ಮ ಸರಕಾರ ಕೂಡ ಕಷ್ಟದಲ್ಲಿಯೇ ರೈತರ ಹಾಗೂ ಸಮಾಜದ ತೊಡಕುಗಳನ್ನು ನಿವಾರಿಸಲು ಪಣ ತೊಟ್ಟು ನಿಂತಿದ್ದು, ಈ ಸಮಸ್ಯೆಗಳನ್ನೆಲ್ಲಾ ಹಿಮ್ಮೆಟ್ಟಿ ಜನಸಾಮಾನ್ಯರ ಮನಸ್ಸನ್ನು ಸಹ ಗೆದ್ದು ತೋರಿಸಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಅಧ್ಯಕ್ಷರು ಕೆ.ಬಿ ಪವಿತ್ರರಾಮಯ್ಯ ಅವರು ತಿಳಿಸಿದರು.
ಅವರು ಶುಕ್ರವಾರ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಬೀರನಹಳ್ಳಿಯ ವಿವಿಧೆಡೆ ರೈತರು ಜಮೀನಿಗೆ ತೆರಳುವ ರಸ್ತೆ, ತೋಟದ ಅಂಚಿನ ತಡೆಗೊಡೆ, ಹಾಗೂ ಸೇತುವೆ ಕೊಚ್ಚಿ ಹೋಗಿದ್ದು, ಆದ್ದರಿಂದ ರೈತರು ಕಳೆದೆರಡು ದಿನಗಳ ಹಿಂದೆ ಕಛೇರಿಗೆ ಭೇಟಿ ನೀಡಿ ಈ ಸಮಸ್ಯೆ ಕುರಿತು ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಶೀಲಿಸಿ, ಬೀರನಹಳ್ಳಿ ಗ್ರಾ.ಪಂ ಗೆ ಭೇಟಿ ನೀಡಿ, ರೈತರ ಸಮಸ್ಯೆ ಕುರಿತು ಚರ್ಚಿಸಿದರು. ನಂತರ ಸಮಸ್ಯೆಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟಕ್ಕೂ ಅಧಿಕ ಮಳೆಯಾಗಿದ್ದು, ಹಲವು ಭಾಗಗಳಲ್ಲಿ ರೈತರು ಈ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಸ್ಥಳದಲ್ಲಿಯೇ ಸಂಬAಧ ಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಬಿ. ಬೀರನಹಳ್ಳಿಯಲ್ಲಿ ಹಾನಿಗೊಳಗಾದ ಪ್ರದೇಶದ ಕಾಮಗಾರಿಯ ಅಂದಾಜು ಮೊತ್ತದ ಕುರಿತು ಮಾಹಿತಿ ನೀಡಲು ಸೂಚಿಸಿದರು.
ನಂತರ ಮಾತನಾಡಿ, ಭದ್ರಾ ಕಾಡಾ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಸಂಬAಧ ಪಟ್ಟ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ, ಅನುದಾನ ಬಿಡುಗಡೆ ಮಾಡುವುದರ ಕುರಿತು ಭರವಸೆಯನ್ನೂ ಸಹ ನೀಡಿದ್ದಾರೆ ಎಂದು ತಿಳಿಸಿದರು.
ಆದ್ದರಿಂದ ರೈತರು ಭಯ ಪಡುವ ಅನಿವಾರ್ಯತೆ ಕಂಡಿತ ಇಲ್ಲ, ನಮ್ಮ ಸರಕಾರ ಎಂದಿಗೂ ರೈತ ಪರವಾದ ಸರಕಾರ, ಮುಂದಿನ ದಿನಗಳಲ್ಲಿ ಖಂಡಿತ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಶ್ರಮಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರು ಶ್ರೀ ಶಿವಕುಮಾರ್, ನೀರು ಬಳಕೆ ದಾರ ಸಂಘ ಅಧ್ಯಕ್ಷರು, ಮಲ್ಲಿಕಪ್ಪ, ಗ್ರಾ. ಸದಸ್ಯರಾದ ಮಂಜುನಾಥ್ ನಾಯ್ಕ್ ಮತ್ತು ಶ್ರೀ ಪುರುಶೋತ್ತಮ್, ಬಿ. ಬೀರನಹಳ್ಳಿ ಯುವಕರ ಸಂಘದ ಸದಸ್ಯರುಗಳಾದ ಸುನೀಲ್, ನಾಗಪ್ಪ, ಗಿರೀಶ್, ಊರಿನ ಗ್ರಾಮಸ್ಥರು ಹಾಗೂ ರೈತ ಮುಖಂಡರು ಹಾಜರಿದ್ದರು.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ