April 18, 2024

Bhavana Tv

Its Your Channel

ಶರಣಶ್ರೀ ಡಾ.ಈಶ್ವರ ಮಂಟೂರ ಇನ್ನಿಲ್ಲ

ಶರಣಶ್ರೀ ಡಾ. ಈಶ್ವರ ಮಂಟೂರ ಅವರು ಕವಿಯಾಗಿ, ಚಿಂತಕರಾಗಿ, ಅನುಭಾವಿ ಪ್ರವಚನಕಾರರಾಗಿ, ಸಾಹಿತಿಗಳಾಗಿ, ಸಮಾಜೋದ್ಧಾರ್ಮಿಕ ಕಾರ್ಯಗಳನ್ನು ಮಾಡುತ್ತ ಮುನ್ನಡೆದಿದ್ದಾರೆ. ಕಲ್ಲು ಮನಸ್ಸಿನ ಹೃದಯಗಳನ್ನು ಹೂವಿನಂತೆ ಅರಳಿಸುವ ಕ್ರೂರಿಗಳ ಭಾವದಲ್ಲಿ ದಯೆಯನ್ನು ತುಂಬುವ, ದ್ವೇಷಿಗಳ ಮನದಲ್ಲಿ ಪ್ರೀತಿಯ ಹಣತೆಯನ್ನು ಹಚ್ಚುವ, ವಿನಯಗುಣ ಸರಳ ಸಂಪನ್ನ ಶರಣರಾದ ಇವರ ತ್ಯಾಗ, ಸೇವೆ ಅನುಪಮವಾದುದು.

ಶರಣಶ್ರೀ ಡಾ. ಈಶ್ವರ ಮಂಟೂರ ಅವರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುನ್ನೂರಿನ ‘ಕಲಾನೇಕಾರ ಕುಟುಂಬದಲ್ಲಿ ೨೩-೦೩-೧೯೭೨ ರಂದು ತಂದೆ ಶ್ರೀಶೈಲಪ್ಪ ತಾಯಿ ಅನ್ನಪೂರ್ಣ ಶರಣ ದಂಪತಿಗಳ ಪುಣ್ಯ
ಉದರದಿಂದ ಜನ್ಮ ತಾಳಿದವರು. ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಸಂಗೀತ, ಸಾಹಿತ್ಯ, ಭಜನೆ, ಪುರಾಣ, ಪ್ರವಚನ ಮುಂತಾದ ಕಲೆಗಳನ್ನು ಮೈಗಂಟಿಸಿಕೊAಡು ಬೆಳೆದವರು ತಿಳಿಯಲಾರದ ಘನವನ್ನು ತಿಳಿಯುವ ಕಾಣಬಾರದ ಪರವಸ್ತುಗಳನ್ನು ಕಾಣುವ ಅಂತರAಗದ ರತ್ನವಾದ ಆತ್ಮವಿದ್ಯೆಯ ಕಡೆಗೆ ಒಲವು ತೋರಿದವರು.

ಪೂಜ್ಯ ಶರಣರು ೧೯೯೩ ರಲ್ಲಿ ಬಿ.ಕಾಂ. ಪದವಿ ಪಡೆದು, ಅಣ್ಣಾಗೃಹಪಾಠ ಶಿಕ್ಷಣ ಕೇಂದ್ರ ಆರಂಭಿಸಿ ಐದು ವರ್ಷಗಳ ಕಾಲ ಜ್ಞಾನಚಿಂತನದಡಿಯಲ್ಲಿ ಆಧ್ಯಾತ್ಮಿಕ ತಳಹದಿಯ ಮೇಲೆ ಸಹಸ್ರಾರು ಮಕ್ಕಳಿಗೆ ಜ್ಞಾನದಾಸೋಹ ನೀಡುತ್ತಲೇ ಬ್ಯಾಂಕಿನಲ್ಲಿ ಕರಣಿಕರಾಗಿ ಸೇವೆ ಸಲ್ಲಿಸಿದವರು. ಬಸವಾದಿ ಶಿವಶರಣರ ತತ್ತ್ವಸಿದ್ಧಾಂತಗಳನ್ನು ಅಪ್ಪಿಕೊಂಡ ಶರಣರು ಪ್ರವಚನಗಳ ಮೂಲಕ ನಾಡಿನ ಜನಮನದಲ್ಲಿ ಬಸವ ತತ್ವವನ್ನು ಬಿತ್ತರಿಸುವ ಸಂಕಲ್ಪ ತೊಟ್ಟ ಇವರು ಬ್ಯಾಂಕ್ ಹುದ್ದೆಗೆ ರಾಜೀನಾಮೆ ನೀಡಿ, ಶರಣ ಪಥದಲ್ಲಿ ಹೆಜ್ಜೆಯಿರಿಸಿದವರು. ನಾಡಿನ ದೇಶೀ ಕಲೆಗಳನ್ನು ಉಳಿಸಿ ಬೆಳೆಸಲು “ರಾಗರಶ್ಮಿ” ಎಂಬ ಹತ್ತು ಕಲಾವಿದರ ಜಾನಪದ ಬಳಗ ಕಟ್ಟಿಕೊಂಡು ಹಳ್ಳಿ-ಹಳ್ಳಿಗೆ ಸಂಚರಿಸಿ, ಸುಗಮ ಸಂಗೀತ ಕ್ಷೇತ್ರವನ್ನು ಶ್ರೀಮಂತಗೊಳಿಸಿದವರು. ಸಮಾಜದ ಏಳ್ಗೆಗಾಗಿ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾದ ಗಡಿಭಾಗದಲ್ಲೆಲ್ಲಾ ಸಂತ ಶರಣರಂತೆ ಸಂಚರಿಸಿ, ಬಹರೇನ್, ದುಬೈ ರಾಷ್ಟ್ರಗಳಲ್ಲೂ ಶರಣ ಸಂಸ್ಕೃತಿಯ ಪ್ರಚಾರ-ಪ್ರಸಾರ, ವಚನ ಪ್ರವಚನ ಮಾಡಿದ ಕೀರ್ತಿ ಈ ಶರಣರಿಗೆ ಸಲ್ಲುತ್ತದೆ.
ಶ್ರೇಷ್ಠ ಅನುಭಾವಿ ಪ್ರವಚನಕಾರರಾದ ಶರಣಶ್ರೀ ಡಾ. ಈಶ್ವರ ಮಂಟೂರ ಅವರು ಗೀತ ರಚನಕಾರರು ಹಾಗೂ ಶ್ರೇಷ್ಠ ಸಂಗೀತಗಾರರು. ಬಸವಭಾವ ಗೀತೆಗಳು, ಬಸವಭಾವ ಪೂಜೆ, ವಚನವಂದನೆ, ತವರಿನ ತಾವರೆ ಮುಂತಾದ ಭಕ್ತಿ ಪರವಶೆಯ ಹತ್ತಾರು ಸಿ. ಡಿಗಳು ಕನ್ನಡಿಗರ ಕೈ ಸೇರುವುದರ ಜೊತೆಗೆ, ದೇಶ-ವಿದೇಶಗಳಲ್ಲಿರುವ ಕನ್ನಡದ ಮನೆಗಳಲ್ಲಿ ಸಂಭ್ರಮಿಸುತ್ತಿವೆ. ನೆತ್ತಿಗೆ ಬುತ್ತಿ, ಅಂತರAಗದ ಮೃದಂಗ, ಪುಟ್ಟಹಣತೆ, ವಚನ ಹನಿ, ಮಹಾಂತ ಜೋಳಿಗೆ, ವಚನವೃಕ್ಷ ಮುಂತಾದ ಕೃತಿ ಕುಸುಮಗಳು ಓದುಗರ ಅಭಿಮಾನಕ್ಕೆ ಸಾಕ್ಷಿಯಾಗಿವೆ.
ಪ್ರವಚನ ಭಾಸ್ಕರ, ಪ್ರವಚನ ಪ್ರಭಾಕರ, ಪ್ರವಚನ ಚೇತನ, ಪ್ರವಚನ ಭೂಷಣ, ಸಂಗೀತ ಸುಧಾಕರ, ಕಂಚಿನಕAಠದ ವೀರವಾಣಿ, ಶರಣಶ್ರೀ ಶ್ರೇಷ್ಠ ಕವಿ, ಅನಾಥ ಮಕ್ಕಳ ತಾಯಿ, ಅಬಲೆಯ ಬಂಧು, ಉತ್ಸಾಹದ ಖಣಿ, ಸಾಹಿತ್ಯದ ಚಿಲುಮೆ, ಮುಂತಾದ ಗೌರವ ಬಿರುದುಗಳಿಗೆ ಭಾಜನರಾಗಿದ್ದಾರೆ.
ಎಂ. ಎ. ಪದವಿ ಪಡೆದ ಶರಣರು ಸತತ ಅಧ್ಯಯನ, ಕಠಿಣ ಪರಿಶ್ರಮ, ಅಂದು ಕೊಂಡದ್ದನ್ನು ಸಾಧಿಸುವ ಛಲ, ನಿರಂತರ ಚಿಂತನದ ಫಲವಾಗಿ ಸ್ವತಃ ಖ್ಯಾತ ಪ್ರವಚನಕಾರರಾಗಿರುವುದರಿಂದ ತಮ್ಮ ಪ್ರವಚನ ಕ್ಷೇತ್ರವನ್ನೇ ಆಧಾರವಾಗಿಟ್ಟುಕೊಂಡು ಇದುವರೆಗೂ ಅಧ್ಯಯನಕ್ಕೆ ಒಳಪಡದ ‘ಕನ್ನಡದಲ್ಲಿ ಪ್ರವಚನ ಸಾಹಿತ್ಯ’ ಪಿಎಚ್.ಡಿ. ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ೨೦೧೩ ಡಿಸೆಂಬರ್ ೨೧ ರ ನುಡಿಹಬ್ಬದ ಸಂಭ್ರಮದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವುದು ಅಭಿಮಾನದ ಸಂಗತಿ.
ಜಮಖAಡಿ ತಾಲೂಕಿನ ಹುನ್ನೂರ-ಮಧುರಖಂಡಿಯ ಸುಂದರ ಪರಿಸರದಲ್ಲಿ ಬೆಟ್ಟದ ಇಳಿಜಾರುವಿನಲ್ಲಿ ‘ಬಸವಜ್ಞಾನ ಗುರುಕುಲ’ ಸಾಂಸ್ಕೃತಿಕ, ಧಾರ್ಮಿಕ, ಆಧ್ಯಾತ್ಮಿಕ ಯೋಗಾಶ್ರಮವನ್ನು ಸ್ಥಾಪಿಸಿದ್ದಾರೆ. ಈ ಆಶ್ರಮದಲ್ಲಿ ನಾಡಿನ ಅನಾಥ ಬಡಮಕ್ಕಳಿಗೆ ಅನ್ನ, ವಸ್ತ್ರ, ಆಶ್ರಯ, ಶಿಕ್ಷಣ, ಸಂಸ್ಕಾರ ನೀಡುವುದರ ಜೊತೆಗೆ ಸಂಗೀತ, ಗಣಕಯಂತ್ರ ಜ್ಞಾನ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ‘ವ್ಯಕ್ತಿತ್ವ ವಿಕಸನ ಶಿಬಿರ’, ಪರಿಸರ ಸಂರಕ್ಷಣೆ, ನೇತ್ರದಾನ, ರಕ್ತದಾನ, ಉಚಿತ ಆರೋಗ್ಯ ಶಿಬಿರಗಳು, ಪುಸ್ತಕ ಪ್ರಕಟಣೆ, ಪ್ರತಿ ತಿಂಗಳ ಕೊನೆಯ ಶನಿವಾರ ‘ಶಿವಾನುಭವ ಸಂಪದ’ ಮಾಸಿಕ ಕಾರ್ಯಕ್ರಮ ನಿರಂತವಾಗಿ ನಡೆಯುತ್ತಿವೆ. ಪ್ರತಿ ವರ್ಷ ಡಿಸೆಂಬರ್ ೨೫, ೨೬ ಮತ್ತು ೨೭ ಮೂರು ದಿನಗಳ ಕಾಲ ‘ಶರಣ ಸಂಸ್ಕೃತಿ ಉತ್ಸವ ಹಾಗೂ ಜಾನಪದ ಕಲಾಮಹೋತ್ಸವ’ವನ್ನು ಅತ್ಯಂತ ವಿಜ್ರಂಭಣೆಯಿAದ ಆಚರಿಸುತ್ತಿದ್ದಾರೆ. ಈ ಮೂಲಕ ನೆಲ-ಜಲ, ಕಲೆ, ಕೃಷಿ, ದಾಸೋಹ ನಾಡು-ನುಡಿ ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸಿದ ಸಾಧಕರಿಗೆ ರಾಜ್ಯಮಟ್ಟದ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವುದು ಇವರ ಆಶ್ರಮದ ವಿಶೇಷತೆ. ನೂರಾರು ಜನ ಎಲೆಮರೆಯ ಕಾಯಿಯುಂತ್ತಿರುವ ಸಾಧಕರನ್ನು ಗೌರವಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು “ಎನಗಿಂತ ಕಿರಿಯರಿಲ್ಲ’ ಎಂಬುದಕ್ಕೆ ರೂಪಕವಾಗಿದ್ದು ಕಾಯಕದಲ್ಲೇ ಕೈಲಾಸ ಇದೆ ಎಂಬುದನ್ನು ಕರಸ್ಥಳದಲ್ಲಿ ಪ್ರತಿಷ್ಠಾಪಿಸಿಕೊಂಡ .

ವರದಿ: ವೀರಣ್ಣ ಸಂಗಳದ ರೋಣ

error: