April 24, 2024

Bhavana Tv

Its Your Channel

ಪೌರಕಾರ್ಮಿಕರ ಸೇವೆಗೆ ಮೆಚ್ಚಿ ಪಾದ ಪೂಜೆ ಮಾಡಿದ ಕೆಎಂಎಫ್ ಅಧಿಕಾರಿ

ಧಾರವಾಡ: ಕೊರೊನಾ ಭೀತಿ ನಡುವೆಯೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿದ ಕೆಎಂಎಫ್ ಅಧಿಕಾರಿಯೊಬ್ಬರು ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ.

ಧಾರವಾಡ ನಗರದ ಟೋಲ್‍ನಾಕಾದಲ್ಲಿ ಪ್ರತಿ ದಿನ 30ಕ್ಕೂ ಹೆಚ್ಚು ಪೌರಕಾರ್ಮಿಕರು ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೂಡಾ ಬೆಳಗಿನ ಜಾವವೇ ಬಂದು ಕಸ ತೆಗೆದುಕೊಂಡು ಹೋಗುವುದು, ರಸ್ತೆ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಇದನ್ನ ಧಾರವಾಡ ಕೆಎಂಎಫ್‍ನ ಟೆಕ್ನಿಕಲ್ ಆಫಿಸರ್ ನಾಗಪ್ಪ ಅರಳೋದ ಅವರು ಕಳೆದ ಒಂದು ತಿಂಗಳಿಂದ ಗಮನಿಸುತ್ತಾ ಬಂದಿದ್ದರು. ಇಂದು ಈ ಪೌರ ಕಾರ್ಮಿಕರ ನಿಸ್ವಾರ್ಥ ಸೇವೆಗೆ ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ.

ಅಲ್ಲದೇ ಪೌರಕಾರ್ಮಿಕರಿಗೆ ತುಪ್ಪ ಹಾಗೂ ಪೇಡಾ ನೀಡಿ, ಜೊತೆಗೆ ದಿನಸಿ ಕಿಟ್ ಕೂಡಾ ಕೊಟ್ಟು ಗೌರವಿಸಿದ್ದಾರೆ.

error: