
ಗುಡಬಂಡೆ : ಗುಂಜೂರು ಶ್ರೀನಿವಾಸ್ ರೆಡ್ಡಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಾಗೂ ಯುವ ಸೇನೆ ಬಳಗದಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ವರ್ಗದವರಿಗೆ,ಪಟ್ಟಣ ಪಂಚಾಯಿತಿಯಲ್ಲಿ ಸ್ವಚ್ಛತೆ ಮಾಡುವ ಪೌರ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡೆಲಾಯಿತು. ಕೊರೋನಾ ವೈರಸ್ ಮಹಾಮಾರಿಯ ದೇಶದ ಆರ್ಥಿಕ ಪರಿಸ್ಥಿತಿ ಕಿತ್ತು ತಿನ್ನುತ್ತಿದೆ ಹಾಗೂ ಜನರ ಜೀವನವನ್ನು ಅಸ್ತವ್ಯಸ್ತ ಮಾಡುತ್ತಿದೆ ಇದನ್ನು ತಡೆಹಿಡಿಯಲು ಪೌರಕಾರ್ಮಿಕರ ಹಾಗೂ ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವೈರಸ್ಸನ್ನು ತಡೆ ಹಿಡಿಯುವ ಕಾರ್ಯಕ್ಕೆ ವೀರ ಯೋಧರಂತೆ ನಾವು ಗೌರವಿಸಬೇಕು. ಕೊರೋನಾ ವೈರಿಯನ್ನು ತಡೆ ಹಿಡಿಯಲು ಕಾರಣರಾದ ಈ ಪೌರ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತರು ತೊಂದರೆಯಲ್ಲಿ ಇರುವಂತಹ ಇವರೆಲ್ಲರಿಗೂ ಒಂದು ಚಿಕ್ಕ ಅಳಿಲು ಸೇವೆಯನ್ನು ಮಾಡಲು ನಾನು ಸಂತಸ ಪಡೆಯುತ್ತೇನೆ ಇನ್ನಷ್ಟು ಮುಂದಿನ ದಿನಗಳಲ್ಲಿ ನಾನು ಈ ಭಾಗದ ಜನರಿಗೆ ಸಹಾಯವನ್ನು ಮಾಡ ಮುಂದಾಗುತ್ತೇನೆ ಎಂದು ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.
ಕಿಟ್ಟ್ ವಿತರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಗುಂಜೂರು ಶ್ರೀನಿವಾಸ್ ರೆಡ್ಡಿ ಹಾಗೂ ರಾಮಚಂದ್ರ ರೆಡ್ಡಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರು ಅಧ್ಯಕ್ಷರು ಅಪ್ಸರ್ ಪಾಷ ಹಾಗೂ ಅಜ್ಮಲ್ ಖಾನ್, ಮೊಹಮ್ಮದ್ ನಾಸೀರ್ ಹಾಗೂ ಮಂಜೂರ್ ಖಾನ್,ಹಾಗೂ ಶಬ್ಬೀರ್ ಮತ್ತು ಯುವ ಮುಖಂಡರು ಗುಂಜೂರು ಶ್ರೀನಿವಾಸರೆಡ್ಡಿ ಟ್ರಸ್ಟ್ನ ಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ