May 5, 2024

Bhavana Tv

Its Your Channel

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಇಲ್ಲ, ಬೆಂಗಳೂರು ತೊರೆಯದಿರಿ: ಜನರಿಗೆ ಗೃಹ ಸಚಿವ ಬೊಮ್ಮಾಯಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಸರಕಾರ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ. ಲಾಕ್‌ಡೌನ್ ಮಾಡುತ್ತಾರೆ ಎಂದು ಭಯಪಡಬೇಡಿ. ದಯವಿಟ್ಟು ಬೆಂಗಳೂರಿನಲ್ಲೇ ಸುರಕ್ಷಿತವಾಗಿರಿ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನರಿಗೆ ಮನವಿ ಮಾಡಿದ್ದಾರೆ.

ಲಾಕ್ ಡೌನ್ ಭೀತಿ ಯಿಂದ ಜನರು ಊರುಗಳಿಗೆ ಹೋದರೆ ಜಿಲ್ಲೆಗಳು ಹಾಗೂ ಹಳ್ಳಿಗಳಲ್ಲಿ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಆದ್ದರಿಂದ ದಯವಿಟ್ಟು ಬೆಂಗಳೂರಿನಲ್ಲಿ ಇರಿ. ಸರ್ಕಾರ ಲಾಕ್ಡೌನ್ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆಂಗಳೂರು ತೊರೆಯುವ ಜನರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ಣಯದಂತೆ ಒಟ್ಟು ನಾಲ್ಕು ಭಾನುವಾರ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿತ್ತು. ಕೊರೋನಾ ಸೋಂಕು ಹಬ್ಬುವುದನ್ನು ತಡೆಯುವ ನಿಟ್ಟಿನಲ್ಲಿ ಜನರೇ ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದರು.

ಪೊಲೀಸರಿಗೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಕೊರೋನಾ ವಾರಿಯರ್ ಗಳಾದ ಪೊಲೀಸರು ಸುರಕ್ಷತೆಯಿಂದ ಇರಬೇಕು ಎಂದರೆ ಜನರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ

error: