May 16, 2024

Bhavana Tv

Its Your Channel

ಒಂದೇ ದಿನ 3 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢ

ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 3176 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿವೆ.
ಒಂದೇ ದಿನ ರಾಜ್ಯದಲ್ಲಿ 1076 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 87 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 60 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ಮೈಸೂರು 6, ಧಾರವಾಡ 5, ಉತ್ತರ ಕನ್ನಡ 3, ಬಾಗಲಕೋಟೆ 3, ಚಿಕ್ಕಬಳ್ಳಾಪುರ 2, ರಾಯಚೂರು 2, ತುಮಕೂರು, ರಾಮನಗರ, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,975, ಧಾರವಾಡ 139, ಬಳ್ಳಾರಿ 136, ಮೈಸೂರು 99, ವಿಜಯಪುರ 80, ದಕ್ಷಿಣ ಕನ್ನಡ 76, ಕಲಬುರಗಿ 67, ಉಡುಪಿ 52, ಯಾದಗಿರಿ 49, ಉತ್ತರ ಕನ್ನಡ 48, ಬೆಳಗಾವಿ 41, ಗದಗ 39, ಬೀದರ್ 35, ದಾವಣಗೆರೆ 35, ಬಾಗಲಕೋಟೆ 34, ಚಿಕ್ಕಬಳ್ಳಾಪುರ 32, ಮಂಡ್ಯ 31, ಶಿವಮೊಗ್ಗ 29, ರಾಯಚೂರು 26, ಹಾಸನ 25, ತುಮಕೂರು 24, ಕೊಡಗು 23, ಕೋಲಾರ 15, ಕೊಪ್ಪಳ 14, ಚಿಕ್ಕಮಗಳೂರು 13, ಚಿತ್ರದುರ್ಗ 12, ಬೆಂಗಳೂರು ಗ್ರಾಮಾಂತರ 10, ಚಾಮರಾಜನಗರ 8, ಹಾವೇರಿ 6, ರಾಮನಗರದಲ್ಲಿ 3 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 47,253 ಕೊರೋನ ಸೋಂಕಿತರ ಪೈಕಿ 18,466 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 1,076 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 928 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 27,853 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: