ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದ್ರೆ ಮಾತ್ರ ಆರೋಗ್ಯ ಇಲಾಖೆಯವರು ಮಾಹಿತಿ ನೀಡುತ್ತಾರೆ. ನೆಗೆಟಿವ್ ಅಂತ ಬಂದ್ರೆ. ಒಂದೇ ಒಂದು ಮಾಹಿತಿ ಕೂಡ ನೀಡದೇ ಸುಮ್ಮನಿರುತ್ತಾರೆ ಎಂಬುದಾಗಿ ಕೊರೋನಾ ಪರೀಕ್ಷೆಗೆ ಒಳಗಾದಂತ ಅನೇಕರು ದೂರಾಗಿತ್ತು. ಇದೀಗ ಈ ನಿರ್ಲಕ್ಷ್ಯಕ್ಕೆ ಆರೋಗ್ಯ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕೋವಿಡ್-19 ಸೋಂಕಿಲ್ಲ (ನೆಗೆಟಿವ್) ಎಂಬುದಾಗಿ ವ್ಯಕ್ತಿಗಳ ಫಲಿತಾಂಶವನ್ನೂ ಎಸ್ಎಂಎಸ್ ಮೂಲಕ ರವಾನಿಸುವಂತೆ ಖಡಕ್ ಸೂಚನೆ ನೀಡಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದಂತ ಡಾ.ಅರುಂಧತಿ ಚಂದ್ರಶೇಖರ್ ಅವರು, ಎಲ್ಲಾ ಕೋವಿಡ್-19 ಪ್ರಯೋಗಾಲಯಗಳ ನೋಡಲ್ ಅಧಿಕಾರಿಗಳು ಕೋವಿಡ್-19 ಸೋಂಕಿಲ್ಲದ (Negative) ವ್ಯಕ್ತಿಗಳ ಫಲಿತಾಂಶ ಬಂದ ಕೂಡಲೇ, ಸಂಬಂಧ ಪಟ್ಟವರಿಗೆ ಎಸ್ ಎಂ ಎಸ್ ಮುಖಾಂತರ ಕನ್ನಡ ಮತ್ತು ಇಂಗ್ಲೀಷ್ ಭಾಷೆ ಎರಡರಲ್ಲೂ ರವಾನಿಸುವಂತೆ ಸೂಚಿಸಿದ್ದಾರೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ