May 18, 2024

Bhavana Tv

Its Your Channel

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ: ಬೆಚ್ಚಿಬಿದ್ದ ಹುಬ್ಬಳ್ಳಿ ಜನ

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರ ಹತ್ಯೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯವಕರ ಹತ್ಯೆ ಮಾಡಲಾಗಿದೆ.

ಹತ್ಯೆಯಾದ ಯುವಕರನ್ನು ಮಂಜುನಾಥ್ ಕಬ್ಬಿನ್ ಮತ್ತು ನಿಯಾಜ್ ಎಂದು ಗುರುತಿಸಲಾಗಿದೆ.ಯಾವುದೋ ಹಳೆ ದ್ವೇಷದಿಂದ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ಇದೆ. ನಿಜಾಮ್ ಮತ್ತು ಮಂಜುನಾಥ್ ಇಬ್ಬರು ಒಟ್ಟಿಗೆ ಇರುವುದನ್ನು ನೋಡಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಬಲ್ ಮರ್ಡರ್‌ನಿಂದ ಹುಬ್ಬಳ್ಳಿ ಜನ ಬೆಚ್ಚಿ ಬಿದ್ದಿದ್ದಾರೆ

error: