May 18, 2024

Bhavana Tv

Its Your Channel

ಹುಬ್ಬಳ್ಳಿಯ ಡಬಲ್ ಮರ್ಡರ್ ಪ್ರಕರಣ : ನಾಲ್ವರು ತಡರಾತ್ರಿ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು.

ಹುಬ್ಬಳ್ಳಿ : ಹುಬ್ಬಳ್ಳಿಯ ಗೋಪನಕೊಪ್ಪದ ಬಸ್ ನಿಲ್ದಾಣ ಬಳಿ ಗುರುವಾರ ತಡರಾತ್ರಿ ನಡೆದ ಇಬ್ಬರು ಯುವಕರ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ.
ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಆರೋಪಿಗಳಾದ ಶ್ರೀನೀವಾಸ ಪರಶುರಾಮ ಹಿರೇಕುಂಬಿ (26) ಅವಿನಾಶ ಬಸವರಾಜ ನರಗುಂದ (29),ಸಂಜೀವ ರೇವಣಸಿದ್ದಪ್ಪ ವಡ್ಡರ (28), ಮಧು ಕಲ್ಮೇಶ ಹಾದಿಮನಿ(25) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಗೋಪನಕೊಪ್ಪ ಸಿದ್ರಾಮೇಶ್ವರ ನಗರ 3ನೇ ಕ್ರಾಸ್‌ದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಂಜುನಾಥ ಕಬ್ಬಿನ್ ಹಾಗೂ‌ ನಿಯಾಜ ಜೋರಮ್ಮನವರ ಎಂಬುವವರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಈ ನಾಲ್ವರು ಆರೋಪಿಗಳು ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ‌ಪರಿಗಣಿಸಿದ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

error: