ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.
ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.
ರಾತ್ರಿ 12 ಗಂಟೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ. ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು. ಅಪರಾಧ ಜಗತ್ತಿನ ಬಗ್ಗೆ ಅವರು ಬರೆದ ಪುಸ್ತಕಗಳು ಲೆಕ್ಕವೇ ಇಲ್ಲ
ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.
ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ
1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.
ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.
ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರರ್ಥಾನ ಶಾಲೆಯ ಸಂಸ್ಥಾಪಕರು .
ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿದ್ದರು
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ