April 20, 2024

Bhavana Tv

Its Your Channel

ರಾಜ್ಯದಲ್ಲಿ ಇಂದು ರಾತ್ರಿಯಿಂದ ಜ.2ರವರೆಗೆ ‘ನೈಟ್ ಕರ್ಪ್ಯೂ’ ಜಾರಿ – ಸಿಎಂ ಯಡಿಯೂರಪ್ಪ ಘೋಷಣೆ.

ಬೆಂಗಳೂರು: ಹೊಸ ರೂಪಾಂತರ ಕರೊನಾ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿ ಮಾಡಿ ಸಿಎಂ ಬಿ.ಎಸ್​.ಯಡಿಯೂರಪ್ಪ ಆದೇಶಿಸಿದ್ದಾರೆ.

ಕರೊನಾದ ಹೊಸ ಪ್ರಬೇಧ ಹಾಗೂ ಎರಡನೇ ಅಲೆ ಆತಂಕ ಹಿನ್ನೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಜಾರಿಯಾಗಿದೆ. ಕೋವಿಡ್​ ಟೆಕ್ನಿಕಲ್​ ಟೀಂನ ಸಲಹೆಯಂತೆ ಕರ್ಫ್ಯೂ ಜಾರಿಯಲ್ಲಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್​ ಆಗಲಿವೆ.

SOURCE:ವಿಜಯವಾಣಿ

error: