ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ರವಿಕುಮಾರ್ ಅವರು, ರಾಜ್ಯ ಸರ್ಕಾರ ಅಧಿಕೃತವಾಗಿ ಯಾವುದೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿಲ್ಲ ಮತ್ತು 9 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಎಂಬ ಆದೇಶ ನಕಲಿ ಎಂದು ಹೇಳಿದ್ದಾರೆ.
ನಾಳೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದ್ದು, ಸಭೆಯ ನಂತರ ಮುಖ್ಯಮಂತ್ರಿಗಳು ಅಧಿಕೃತವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.
ಯಾರೋ ಕಳೆದ ವರ್ಷದ ಮಾರ್ಗಸೂಚಿಸಿ ದಿನಾಂಕ ಬದಲಿಸಿ ಹರಿಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
source : ಕನ್ನಡ ಪ್ರಭ
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ