ಬೆಂಗಳೂರು: ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘ ನೀಡುವ ಎರಡು ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಮತ್ತು ಮೈಸೂರಿನ ಪುಸ್ತಕ ಪ್ರೇಮಿ ಸಯ್ಯದ್ ಐಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
2021ನೇ ಸಾಲಿನ ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ಆರ್. ಪೂರ್ಣಿಮಾ ಅವರು ಭಾಜನರಾಗಿದ್ದಾರೆ. ಎಂ. ಗೋಪಾಲಕೃಷ್ಣ ಅಡಿಗ ಪ್ರಶಸ್ತಿಯನ್ನು ಇತ್ತೀಚೆಗೆ ಮೈಸೂರಿನ ಬೆಂಕಿ ಅನಾಹುತದಲ್ಲಿ ತನ್ನ ಪುಸ್ತಕ ಮಳಿಗೆಯನ್ನು ಕಳೆದುಕೊಂಡ ಸಯ್ಯದ್ ಐಸಾಕ್ ಅವರಿಗೆ ನೀಡಲಾಗುತ್ತಿದೆ. ಈ ಎರಡೂ ಪ್ರಶಸ್ತಿಗಳನ್ನು ಅಂಕಿತ ಹಾಗೂ ಶೃಂಗಾರ ಪ್ರಕಾಶನ ಪ್ರಾಯೋಜಿಸಿದ್ದು, ತಲಾ ಐದು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿವೆ.
source : ವಿಜಯವಾಣಿ
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ