ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊAದು ಪಲ್ಟಿಯಾಗಿ ಮಗು ಸೇರಿ ಮೂರು ಮಂದಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಕೂಲಿ ಕಾರ್ಮಿಕರು ಹಿರಿಯೂರಿನಿಂದ ಚಳ್ಳಕೆರೆ ಕಾಂಕ್ರೀಟ್ ಕೆಲಸಕ್ಕೆಂದು ಟೆಂಪೋದಲ್ಲಿ ಹೋಗುತ್ತಿದ್ದರು. ಈ ವೇಳೆ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಅಪಘಾತ ನಡೆದಿದೆ.
ಮೃತ ದುರ್ದೈವಿಗಳನ್ನು ಹಿರಿಯೂರು ನಿವಾಸಿಗಳಾದ ಸೆಲ್ವಿ (೩೫ ವ), ದೀಪಿಕಾ (೦೬ ವ), ನೀಲಮ್ಮ (೨೯ ವ) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಹಿರಿಯೂರು ಸಿಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ