ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಮುಂದೂಡುವAತೆ ಸರ್ಕಾರ ತಿಳಿಸಿದ್ದು. ಈ ಹಿನ್ನಲೆಯಲ್ಲಿ, ದಿನಾಂಕ ೦೯-೦೫-೨೦೨೧ರಂದು ನಿಗದಿಪಡಿಸಲಾಗಿದ್ದಂತ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಮುಂದೂಡಿಕೆ ಮಾಡಿ, ರಾಜ್ಯ ಸರ್ಕಾರ ಆದೇಶಿದೆ.
ಈ ಕುರಿತಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ ವೆಂಕಟಸ್ವಾಮಿ ಅವರು, ಕೇಂದ್ರ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ದಿನಾಂಕ ೦೯-೦೫-೨೦೨೧ಕ್ಕೆ ನಿಗದಿಪಡಿಸಿದ್ದು, ಚುನಾವಣಾ ಪ್ರಕ್ರಿಯೆಯ ಪೂರ್ವ ಸಿದ್ಧತೆಗಳನ್ನು ಬಹುತೇಕ ಅಂತಿಮಗೊAಡಿದೆಯೆAದು, ಕೋವಿಡ್-೧೯ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ಪತ್ರಿಕಾ ವರದಿಗಳಲ್ಲಿ ಸಾಹಿತ್ಯ ಪರಿಷತ್ತಿನ ಮತದಾರರು ಹಾಗೂ ಅಭ್ಯರ್ಥಿಗಳು ಪರ-ವಿರೋಧದ ಅಭಿಪ್ರಾಯಗಳು ಕಂಡುಬAದಿರುವುದಾಗಿ ತಿಳಿಸಿ, ಮುಂದಿನ ದಿನಗಳಲ್ಲಿ ಕೋವಿಡ್-೧೯ರ ಪ್ರಕರಣಗಳು ಹೆಚ್ಚಾಗುವ ಸಂಭವವಿರುವುದರಿAದ ಚುನಾವಣಾ ಪ್ರಕ್ರಿಯೆಯನ್ನು ಇಂದಿನವರೆಗೆ ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದೂಡು, ಮುಂದೆ ಅದೇ ಹಂತದಿAದ ಚುನಾವಣೆ ಪ್ರಕ್ರಿಯೆಯನ್ನು ಯಥಾವತ್ತಾಗಿ ಮುಂದುವರೆಸಲು ಕೋರಿ ಸರ್ಕಾರಕ್ಕೆ ಮನವಿ ಮಾಡಿದರು
ಈ ಬಗ್ಗೆ ಪರಿಶೀಲಿಸಲಾಗಿದೆ, ರಾಜ್ಯದಲ್ಲಿದಲ್ಲಿ ಪ್ರಸ್ತುತ ಕೋವಿಡ್-೧೯ರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯಾಧ್ಯಂತ ೧೪೪ ಸೆಕ್ಷನ್ ಜಾರಿಯಾಗಿದ್ದು, ರಾತ್ರಿ ವೇಳೆ ಮತ್ತು ವಾರಾಂತ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಮತದಾರರ ಮತ್ತು ಚುನಾವಣಾ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲವೆಂದು ಸರ್ಕಾರವು ಮನಗೊಂಡು, ಕೋವಿಡ್-೧೯ ಸಾಂಕ್ರಾಮಿಕ ರೋಗ ಕಡಿಮೆಯಾಗುವವರೆಗೂ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಮುಂದೂಡಲು ತೀರ್ಮಾನಿಸಿದೆ.
ಈ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಪ್ರಸ್ತುತ ಯಾವ ಹಂತದಲ್ಲಿ ಇರುತ್ತದೋ ಅಲ್ಲಿಂದ ಮುಂದಿನ ಆದೇಶದವರೆವಿಗೆ ಮುಂದೂಡಿ, ಮುಂದೆ ಇದೇ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿAದ ಯಥಾವತ್ತಾಗಿ ಮುಂದುವರೆಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
SOURCE:Kannada News Now
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ