ಬೆಳಗ್ಗೆ ೬ರಿಂದ ಸಂಜೆ ೬ರವರೆಗೂ ಹಾಲಿನ ಬೂತ್, ತಳ್ಳುವ ಗಾಡಿ ವ್ಯಾಪಾರಕ್ಕೆ ಅವಕಾಶ
ಬೆಂಗಳೂರು: ಕೋವಿಡ್-೧೯ ನಿಯಮ ಪಾಲಿಸುವುದರೊಂದಿಗೆ ರವಿವಾರದಿಂದ ರಾಜ್ಯದಾದ್ಯಂತ ಪ್ರತಿದಿನ ಮಧ್ಯಾಹ್ನ ೧೨ ಗಂಟೆಯವರೆಗೂ ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲನ್ನು ತಪ್ಪಿಸುವ ಸಲುವಾಗಿ ಮೇ ೨ರಿಂದ ಜಾರಿಗೆ ಬರುವಂತೆ ಬೆಳಗ್ಗೆ ೬ರಿಂದ ಸಂಜೆ ೬ ಗಂಟೆಯವರೆಗೂ ಹಾಪ್ ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿ ಮೂಲಕ ಹಣ್ಣು-ತರಕಾರಿ ವ್ಯಾಪಾರವನ್ನು ಮಾಡಬಹುದಾಗಿದೆ. ಆದರೆ, ಮಾರುಕಟ್ಟೆ ದರಕ್ಕೆ ಮಾತ್ರ ಮಾರಾಟ ಮಾಡಬೇಕಿದ್ದು, ಬೆಲೆಯನ್ನು ಹೆಚ್ಚಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಇನ್ನು, ನಾಳೆಯಿಂದ ಬೆಳಗ್ಗೆ ೬ರಿಂದ ಮಧ್ಯಾಹ್ನ ೧೨ ಗಂಟೆಯವರೆಗೂ ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ