ವರದಿ: ಅರುಣ ಭಟ್ ಕಾರ್ಕಳ
ಉಡುಪಿ : ರಾಜ್ಯದಲ್ಲಿ ವಿಶ್ವಕರ್ಮ ಸಮಾಜವನ್ನು ಬಲಿಷ್ಠವಾಗಿ ಕಟ್ಟಿ ಸಮಾಜ ಪ್ರಶ್ನಾತೀತ ನಾಯಕರಾದ, ಹಿಂದುಳಿದ ವರ್ಗಗಳ ನಾಯಕರೂ ಆಗಿರುವ ಕೆ.ಪಿ.ನಂಜುAಡಿಯವರಿಗೆ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತೇವೆ.
ವಿಶ್ವಕರ್ಮ ಸಮಾಜಕ್ಕೆ ರಾಜಕೀಯ ಶಕ್ತಿಯನ್ನೂ ನೀಡುತ್ತಿಲ್ಲ. ರಾಜ್ಯದ ಬಿಜೆಪಿ ಸರಕಾರದ ಮೇಲೆ ಭರವಸೆ ಇರಿಸಿಕೊಂಡಿದ್ದೇವು, ಆದರೆ ನಮಗೆ ಯಾವೂದೇ ವ್ಯವಸ್ಥೆಯನ್ನು ಮಾಡಿಕೊಡುತ್ತಿಲ್ಲ. ಇನ್ನಾದರೂ ಶೀಘ್ರವಾಗಿ ವಿಶ್ವಕರ್ಮರಿಗೆ ನ್ಯಾಯ ನೀಡುವ ಮೂಲಕ ನಮ್ಮ ನಾಯಕರಾದ ಕೆ.ಪಿ.ನಂಜುAಡಿಯವರಿಗೆ ರಾಜಕೀಯ ಶಕ್ತಿ ನೀಡಬೇಕಾಗಿ ತಮ್ನನ್ನು ಒತ್ತಾಯಿಸುತ್ತೇವೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾ ದ ಉಡುಪಿ ಜಿಲ್ಲಾಧ್ಯಕ್ಷ ನೆರಂಬಳ್ಳಿ ರಮೇಶ ಆಚಾರ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.ಅವರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು ಮುಂದೆ ನಮ್ಮ ನಾಯಕರಿಗೆ ರಾಜಕೀಯದ ಶಕ್ತಿಯ ಜೊತೆಗೆ ಸರ್ಕಾರದ ವಿವಿಧ ಸವಲತ್ತು ನೀಡದಿದ್ದರೆ ನಮ್ಮ ನಾಯಕರೊಂದಿಗೆ ನಾವೆಲ್ಲ ಚರ್ಚಿಸಿ ಮುಂದಿನ ತೀರ್ಮಾನವನ್ನು ನಾವು ತೆಗೆದುಕೊಳ್ಳುತ್ತೇವೆ.
ನಮ್ಮ ನಾಯಕರಾದ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುAಡಿಯವರು ರಾಜ್ಯದ ೨೨೪ ವಿಧಾನ ಸಭಾ ಕ್ಷೇತ್ರದಲ್ಲಿ ಸಂಚಾರ ಮಾಡಿ, ಸರ್ಕಾರದಿಂದ ಆಗಿರುವ ಅನ್ಯಾಯದ ಬಗ್ಗೆ ವಿಶ್ವಕರ್ಮ ಸಮಾಜದ ಮಂದಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಸಮಾಜದ ಸಂಘಟನೆಯನ್ನು ಇನ್ನಷ್ಟು ಪ್ರಬಲವಾಗಿ ಮಾಡಲಿದ್ದಾರೆ. ಬಿಜೆಪಿಯನ್ನು ನಂಬಿ ಬೆಂಬಲಿಸಿದ ವಿಶ್ವಕರ್ಮರಿಗೆ ಬಿಜೆಪಿಯಿಂದಲೇ ಅನ್ಯಾಯವಾಗುತ್ತಿದೆ. ನಮ್ಮ ವಿಶ್ವಕರ್ಮ ಸಮಾಜದ ಉನ್ನತಿಗಾಗಿ ದುಡಿಯುತ್ತಿರುವ ನಮ್ಮೇಲ್ಲರ ಶಕ್ತಿಯೂ ಆಗಿರುವ ನಾಯಕ ಕೆ.ಪಿ.ನಂಜುAಡಿಯವರಿಗೆ ಶಕ್ತಿ ಕೊಡಿ, ವಿಶ್ವಕರ್ಮ ಸಮಾಜವನ್ನು ಸಂಕಷ್ಟದಿoದ ಪಾರು ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಮಾನ್ಯ ನಳಿನ್ಕುಮಾರ್ಕಟೀಲ್ ಮತ್ತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ. ಇಲ್ಲವಾದರೆ ಕೇಂದ್ರದ ನಾಯಕರನ್ನು ಭೇಟಿ ಮಾಡಿ ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ವಿವರಿಸಿ ನ್ಯಾಯ ಕೇಳುತ್ತೇವೆ.
ರಾಜ್ಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಸೂಕ್ತ ಸೌಲಭ್ಯ ಸವಲತ್ತು ಕಲ್ಪಿಸುತ್ತೇವೆ, ವಿಶ್ವಕರ್ಮರ ನಾಯಕರಾದ ನಂಜುAಡಿಯವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ, ಹಿಂದುಳಿದ ವರ್ಗಗಳ ನಾಯಕರಾಗಿ ಬೆಳೆಸುತ್ತೇವೆ ಎಂದು ಯಡಿಯೂರಪ್ಪನವರು ಭರವಸೆ ನೀಡಿದ್ದರು. ಆದರೆ ಈ ತನಕ ಯಾವೂದೇ ಸ್ಥಾನಮಾನ ನೀಡಿಲ್ಲ. ಇನ್ನಾದರೂ ಸಚಿವ ಸ್ಥಾನ ನೀಡಿ ವಿಶ್ವಕರ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕಾಗಿ ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ರಮೇಶ ಆಚಾರ್ಯ ತಿಳಿಸಿದರು.
ಸುದ್ದಿ ಗೋಷ್ಠಿಯಲ್ಲಿ ರಾಮಕೃಷ್ಣ ಆಚಾರ್ಯ ಕೋಟ.ಅಧ್ಯಕ್ಷರು. ಯುವ ಘಟಕ. ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ. ಉಡುಪಿ ಜಿಲ್ಲೆ,ವಿಶ್ವಕರ್ಮ ಸಮಾಜದ ಮುಖಂಡರಾದ ನಾರಾಯಣ ಆಚಾರ್ಯ ಬೈಂದೂರು, ಗಂಗಾಧರ ಆಚಾರ್ಯ ಬಾರ್ಕೂರು, ನಾಗರಾಜ್ ಆಚಾರ್ಯ ಬೈಂದೂರು, ಮಹೇಶ್ ಆಚಾರ್ಯ ಬೈಂದೂರು ಉಪಸ್ಥಿತರಿದ್ದರು.
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ