![](https://kannada.bhavanatv.com/wp-content/uploads/2020/05/corona-udupi.png?v=1590471174)
ಉಡುಪಿ: ಕೊರೊನಾ ಮುಕ್ತವಾಗಿದ್ದ ಉಡುಪಿ ಜಿಲ್ಲೆಯಲ್ಲೀಗ ಕೊರೊನಾ ಸೋಂಕು ಅಟ್ಟಹಾಸವನ್ನು ಮೆರೆಯುತ್ತಿದೆ. ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಖ್ಯೆ ಶತಕ ದಾಟಿದೆ. ಅದ್ರಲ್ಲೂ 5,000 ಕ್ಕೂ ಅಧಿಕ ಮಂದಿಯ ತಪಾಸಣಾ ವರದಿ ಇನ್ನಷ್ಟೇ ಬರಬೇಕಾಗಿದ್ದು, ಆತಂಕ ಮೂಡಿಸಿದೆ.
ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಲೇ ಅಲರ್ಟ್ ಆಗಿದ್ದ ಜಿಲ್ಲಾಡಳಿತ ಕೆಲವೇ ದಿನಗಳಲ್ಲಿ ಕೊರೊನಾ ಮುಕ್ತವಾಗಿತ್ತು. ಮಾತ್ರವಲ್ಲ ಗ್ರೀನ್ ಝೋನ್ ವ್ಯಾಪ್ತಿಗೂ ಸೇರ್ಪಡೆಯಾಗಿತ್ತು. ಆದ್ರೆ ಮುಂಬೈ ನಂಜು ಕೃಷ್ಣನಗರಿಯನ್ನು ಇನ್ನಿಲ್ಲದಂತೆ ಕಾಡುತ್ತಿದೆ.
ವಿದೇಶಿಗರು ಹಾಗೂ ಮುಂಬೈ ವಾಸಿಗಳಿಂದಲೇ ಜಿಲ್ಲೆಯಲ್ಲೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದೀಚೆಗೆ ಕೊರೊನಾ ಪೀಡಿತರ ಸಂಖ್ಯೆ 108ಕ್ಕೆ ತಲುಪಿದೆ.
ಮುಂಬೈನಿಂದ 6,000ಕ್ಕೂ ಅಧಿಕ ಮಂದಿ ಆಗಮಿಸಿದ್ದಾರೆ. ಈ ಪೈಕಿ ಕೆಲವರ ವರದಿ ಮಾತ್ರವೇ ಬಂದಿದ್ದು, ಇನ್ನೂ 3,500 ಮಂದಿಯ ಕೊರೊನಾ ತಪಾಸಣಾ ವರದಿ ಇನ್ನಷ್ಟೇ ಬರಬೇಕಾಗಿದೆ. ಅಷ್ಟೇ ಅಲ್ಲಾ 2,500ಕ್ಕೂ ಅಧಿಕ ಮಂದಿಯನ್ನು ಇನ್ನಷ್ಟೇ ತಪಾಸಣೆಗೆ ಒಳಪಡಿಸಬೇಕಿದೆ.
ಜೊತೆಗೆ ಕೊರೊನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಗಂಟಲು ದ್ರವದ ಪರೀಕ್ಷೆ ಇನ್ನಷ್ಟೇ ನಡೆಸಬೇಕಾಗಿರುವುದರಿಂದ ಉಡುಪಿ ಜಿಲ್ಲೆಯೊಂದರಲ್ಲೇ ಬರೋಬ್ಬರಿ 5,000ಕ್ಕೂ ಮಿಕ್ಕಿದವರ ವರದಿಯನ್ನು ನಿರೀಕ್ಷಿಸಲಾಗಿದೆ.
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ