April 27, 2024

Bhavana Tv

Its Your Channel

ಶಿಕ್ಷಕ ಪಾಂಡುರ0ಗ ಮೊಗೇರ ಇವರಿಗೆ ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣರರಿಂದ ಸನ್ಮಾನ

ಉಡುಪಿ ;ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಉಡುಪಿ ಜಿಲ್ಲೆ ರೆಡ್ ಕ್ರಾಸ್ ಸೊಸೈಟಿಯ ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹಲವು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿ ಹಾಗೂ ರಕ್ತದಾನ ಶಿಬಿರ ಆಯೋಜಿಸಿ ಹಲವು ಜೀವಗಳನ್ನು ಉಳಿಸಿ ಮಾನವೀಯತೆಯ ಸೇವೆ ಮಾಡಿರುವ ಭಟ್ಕಳ ನ್ಯೂ ಇಂಗ್ಲೀಷ್ ಸ್ಕೂಲ್ ನ ಶಿಕ್ಷಕರಾದ ಪಾಂಡುರAಗ ಮೊಗೇರ ಇವರನ್ನು ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣರವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರಾದ ಬಸರೂರು ರಾಜೀವ ಶೆಟ್ಟಿ ಅಧ್ಯಕ್ಷತೆ ವಹಿಸಿ, ಪಾಂಡುರAಗ ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿ ಎಂದು ಶುಭ ಹಾರೈಸಿದರು. ಡಾ. ಸುದೇಶ ಕುಮಾರ ಯು., ಕಾರ್ಯದರ್ಶಿ ರತ್ನಾಕರ ಶೆಟ್ಟಿ, ರಾಘವೇಂದ್ರ ಕರ್ವಾಲೊ ಇತರರರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

error: