ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಇಂದು ಮುಂಜಾನೆ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ. ಪೇಟೆಯ ನೀರಿನ ಟ್ಯಾಂಕ್ ಬಳಿಯಿರುವ ಜಿ. ದಿನೇಶ್ ನಾಯಕ್ ಹಾಗೂ ಜಿ. ಪದ್ಮನಾಭ್ ನಾಯಕ್ ಅವರ ಅಂಗಡಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ. 20 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ದುರ್ಘಟನೆ ನಡೆದಿದ್ದು, 3.40 ರ ಸುಮಾರಿಗೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಕಾರ್ಯಾಚರಣೆಯಲ್ಲಿ ಕುಂದಾಪುರ ಅಗ್ನಿ ಶಾಮಕ ಠಾಣಾಧಿಕಾರಿ ಕೆ.ಎನ್. ಮೊಗೇರ, ಸಿಬಂದಿಯಾದ ಕೆ.ಟಿ. ಗೌಡ, ನಾಗರಾಜ ಪೂಜಾರಿ, ಮಂಜುನಾಥ್ ಪೂಜಾರಿ, ಆನಂದ ಭಾಗಿಯಾಗಿದ್ದರು. ಗಂಗೊಳ್ಳಿ ಎಸ್ಐ ಭೀಮಾಶಂಕರ, ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ