ಮಲ್ಪೆ : ಉಡುಪಿ ಜಿಲ್ಲೆಯ ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ನಡೆದ ಯುವಕ ಯೋಗೀಶ್ ಎಂಬವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಬಂಧಿಸಿದ ಆರೋಪಿಗಳು ಸುಜಿತ್ ಪಿಂಟೊ ಅವನ ಅಣ್ಣ ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎನ್ನುವವರು ಎಂದು ತಿಳಿಯಲಾಗಿದೆ.
ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗೀಶ್ ಮತ್ತು ವಿನಯ್ ನಡುವೆ ಮಾತಿನ ಚಕಮಕಿ ನಡೆದಿತ್ತು.ನಂತರ ವಿನಯ್,ಸುಜಿತ್ ಪಿಂಟೊ ಮತ್ತು ಇತರ ಜೊತೆ ಬಂದು ಗಲಾಟೆ ತಾರಕಕ್ಕೇರಿ ಆರು ಜನ ಆರೋಪಿಗಳು ಯೋಗೀಶ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಘಟನೆಯ ಬಗ್ಗೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಎಸ್ ಪಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಉಡುಪಿ ಡಿವೈಎಸ್ಪಿ ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ಸಿಪಿಐ ಮಂಜುನಾಥ್, ಮಲ್ಪೆ ಪಿಎಸ್ ಐ ತಿಮ್ಮೇಶ್ ಮತ್ತು ಉಡುಪಿ ಪಿಎಸ್ ಐ ಸಕ್ತೀವೇಲು ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಕೃತ್ಯಕ್ಕೆ ಬಳಸಿದ ಕಾರು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಈ ಕೊಲೆ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ಅದರಲ್ಲಿ ಅನುಪ್ ಮತ್ತು ಗಿರೀಶ್ ಶೆಟ್ಟಿ ಎಂಬವರು ತಲೆಮರೆಸಿಕೊಂಡಿದ್ದಾರೆ.ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ