ಕುಂದಾಪುರ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಗರದ ಗೋಪಾಡಿಯಲ್ಲಿ ನಡೆದಿದೆ. ಮಣೂರು ಪಡುಕೆರೆ ನಿವಾಸಿ ರಾಮ ಪೂಜಾರಿ(೪೦) ಹಾಗೂ ಬ್ರಹ್ಮಾವರ ನಿವಾಸಿ ಸುಬ್ರಹ್ಮಣ್ಯ (೩೦) ಬಂಧಿತ ಆರೋಪಿಗಳು ಖಚಿತ ಮಾಹಿತಿ ಆಧರಿಸಿ ಕುಂದಾಪುರ ಆಹಾರ ನೀರಿಕ್ಷಕ ಎಚ್.ಎಸ್ ಸುರೇಶ್ ಹಾಗೂ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಸಿಬ್ಬಂದಿಗಳು ಗೋಪಾಡಿ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿದ್ದು ಮಾರುತಿ ಸುಜುಕಿ ವಾಹನದಲ್ಲಿ ಅಕ್ಕಿ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಪಡಿತರ ಅಕ್ಕಿಯನ್ನು ಜನರಿಂದ ಖರೀದಿಸಿ ಹೆಚ್ಚಿನ ಬೆಲೆಗೆ ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿದ್ದೇವು ಎಂದು ತಿಳಿಸಿದ್ದಾರೆ.
ಆರೋಪಿಗಳಿಂದ ಒಟ್ಟು ೪ ಲಕ್ಷ ರೂ. ಮೌಲ್ಯದ ಮಾರುತಿ ಸುಜುಕಿ ಟರ್ಬೋ ವಾಹನ,೨೨,೫೦೦ ರೂ. ಮೌಲ್ಯದ ೧೫ ಕಿಂಟ್ವಾಲ್ ಅಕ್ಕಿ, ೫೫೦೦ ರೂ ನಗದು ಹಾಗೂ ೨ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ