ಉಡುಪಿ: ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ವಾತಾವರಣ ಇರಲಿದೆ. ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಭಾರತ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಒಂದು ತಾಸಿಗೆ ೪೫-೫೫ ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಕೂಡಿದ ಬಿರುಗಾಳಿಯ ವಾತಾವರಣ ಇರಲಿದೆ. ನಾಳೆ (ಸೆ. ೧೦) ರಾತ್ರಿ ೧೧.೩೦ರ ವರೆಗೆ ರ್ನಾಟಕ ಕರಾವಳಿಯ ಮಂಗಳೂರಿನಿಂದ ಕಾರವಾರದ ವರೆಗಿನ ವ್ಯಾಪ್ತಿಯಲ್ಲಿ ಸಮುದ್ರದಲ್ಲಿ ೨.೩ – ೨.೬ ಮೀಟರ್ ಎತ್ತರದ ಅಲೆಗಳು ಏಳಲಿವೆ. ಅಲೆಗಳ ಮೇಲ್ಮೈ ವೇಗವು ವೇಗವು ಸೆಕೆಂಡಿಗೆ ೩೬ – ೫೬ ಸೆಂ.ಮೀ. ನಡುವೆ ಬದಲಾಗುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆದ್ದರಿಂದ ಮುನ್ನೆಚ್ಚರಿಕೆ ಸಲುವಾಗಿ ಕರಾವಳಿಯ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ಕೊಡಲಾಗಿದೆ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ