ಕುಂದಾಪುರ : ಇನ್ಸುಲೇಟರ್ ವಾಹನದಲ್ಲಿ ಭಟ್ಕಳದಿಂದ ಕುಂದಾಪುರಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.
ಮoಗಳೂರು ಹರೇಕಳ ನಿವಾಸಿ ಮಹಮ್ಮದ್ ಸಾಕೀರ್(೨೪ ವರ್ಷ), ಮಹಮ್ಮದ್ ಜಾಫರ್ (೩೨ ವರ್ಷ), ಬೈಂದೂರು ಕಿರಿ ಮಂಜೇಶ್ವರ ನಿವಾಸಿ ಅಲ್ಫಾಜ್ (೨೦ ವರ್ಷ), ಹೊನ್ನಾವರ ನಿವಾಸಿ ಮಹಮ್ಮದ್ ಇಸೂಫ್ ಸಾಫ್ (೪೫ ವರ್ಷ) ಎಂಬವರೇ ಬಂಧಿತ ಆರೋಪಿಗಳು.
ಭಟ್ಕಳದಿಂದ ಕುಂದಾಪುರಕ್ಕೆ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಗಂಗೊಳ್ಳಿ ಪಿ ಎಸ್ ಐ ಭೀಮಾ ಶಂಕರ್ ಮತ್ತು ತಂಡದವರು ಕಾರ್ಯಾಚರಣೆ ನಡೆಸಿ, ಮರವಂತೆ ಮಸೀದಿ ಬಳಿ ರಾ.ಹೆ-೬೬ರಲ್ಲಿ ಇನ್ಸುಲೇಟರ್ ಪರಿಶೀಲಿಸಿದಾಗ ಬರೋಬ್ಬರಿ ೧೪,೪೫,೦೦೦ ರೂಪಾಯಿ ಮೌಲ್ಯದ ಸೊತ್ತು ಪತ್ತೆಯಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ