April 25, 2024

Bhavana Tv

Its Your Channel

ಕಾರ್ಕಳ ನಿವಾಸಿ, ಮುಂಬೈ ಹೊಟೇಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಮುಂಬೈ ಹೊಟೇಲ್ ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕೃಷ್ಣ ಬೆಟ್ಟು ನಿವಾಸಿ ಸುನೀಲ್ ಶೆಟ್ಟಿ (45) ಮೃತ ದುರ್ದೈವಿ. ಅವರು ಪೂನಾದಲ್ಲಿ ಹೊಟೇಲು ಉದ್ಯಮ ನಡೆಸುತ್ತಿದ್ದರು. ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದಿದ್ದ ಸುನೀಲ್ ಶೆಟ್ಟಿ, ವ್ಯಾಪಾರದಲ್ಲಿ ವಿಪರೀತ ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದರು. ಭಾನುವಾರ ಸಂಜೆ ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆಯಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

error: