April 26, 2024

Bhavana Tv

Its Your Channel

ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಹಿಂದುಳಿದ ವರ್ಗ ಮೋರ್ಚಾದ ಪದಗ್ರಹಣ ಸಮಾರಂಭ

ಕಾರ್ಕಳ : ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಹಿಂದುಳಿದ ವರ್ಗ ಮೋರ್ಚಾದ ಪದಗ್ರಹಣ ಸಮಾರಂಭ ಕಾರ್ಕಳ ಶಾಸಕರ ಕಛೇರಿ ವಿಕಾಸದಲ್ಲಿ ನಡೆಯಿತು.
ಕ್ಷೇತ್ರ ಅಧ್ಯಕ್ಷರಾದ ಮಹಾವೀರ ಹೆಗ್ಡೆ ಅಧ್ಯಕ್ಷತೆ ವಹಿಸಿ ಪದಗ್ರಹಣ ನೆರವೇರಿಸಿದರು. ಮಾನ್ಯ ಶಾಸಕರಾದ ವಿ. ಸುನಿಲ್ ಕುಮಾರ್ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಾರ್ಕಳದಲ್ಲಿ ವಿಶೇಷವಾಗಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಕಟ್ಟಿ ಬೆಳೆಸಬೇಕು ಮತ್ತು ಎಲ್ಲಾ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ನೂತನವಾಗಿ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾಗಿ ರಮಾನಂದ ನಲ್ಲೂರು ಜವಾಬ್ದಾರಿ ಸ್ವೀಕರಿಸಿದರು. ಪ್ರಧಾನ ಕಾರ್ಯದರ್ಶಿಗಳಾಗಿ ದಿವಾಕರ ಬಂಗೇರ ಮತ್ತು ಶ್ರೀನಿವಾಸ ಎರ್ಲಪಾಡಿ ಜವಾಬ್ದಾರಿ ಸ್ವೀಕರಿಸಿದರು.
ವೇದಿಕೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುತ್ಯಾರ್, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಕಾರ್ಯದರ್ಶಿಗಳಾದ ರವೀಂದ್ರ ಕುಮಾರ್, ರೇಶ್ಮಾ ಉದಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

error: