
ಉಡುಪಿ: ಡಿ.೦೬;ಕೇಂದ್ರ ಸರಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಾಸ್ಸು ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ ೧೧ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ ೩೦೦ ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.೦೮ ರಂದು ಜನತಾ ಕರ್ಫ್ಯೂ/ ಅಖಿಲಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು ಕಾರ್ಪೊರೇಟ್ ಕಂಪೆನಿಗಳ ಹಿಡಿತಕ್ಕೆ ಒಳಗಾಗುತ್ತಾರೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಹೆಚ್ಚುತ್ತದೆ. ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ ಎಂದಿದ್ದಾರೆ,
ಡಿ.೦೮ ರಂದು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊAದಿಗೆ ಪ್ರತಿಭಟನೆ ನಡೆಸಲಿದೆ ಎಂದು ಅಧ್ಯಕ್ಷರು ಕೆ.ಶಂಕರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ