ಕಾರ್ಕಳ: ಶಿಕ್ಷಣ ಇಲಾಖೆ ಕಾರ್ಕಳ ಹಾಗೂ ರೋಟರಿ ಆನ್ಸ್ ಕ್ಲಬ್ನ ಸಹಯೋಗದೊಂದಿಗೆ ವಿದ್ಯಾಗಮನ ಪ್ರಯುಕ್ತ ಶಾಲಾಮಕ್ಕಳಿಗೆ ಕೊರೋನಾ ಜಾಗೃತಿ ಮತ್ತು ಮಾಹಿತಿ ಹೊಂದಿರುವ ಕರಪತ್ರಗಳನ್ನು ಮಾನ್ಯ ಶಾಸಕರು ಉದ್ಘಾಟಿಸಿದರು. ಆನ್ಲೈನ್ ಮೂಲಕ ಎಲ್ಲಾ ಶಾಲೆಗಳಿಗೆ ಕೋರೋನ ತಡೆಗಟ್ಟುವ ಮಾಹಿತಿಯನ್ನು ರೋ. ರಮಿತ ಶೈಲೇಂದ್ರ ರಾವ್ ನೀಡಿದರು. ನಂತರ ತಾಲೂಕಿನ ೨೧ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಅಧಿಕಾರಿ ಶಶಿಧರ್ ಅವರು ಈ ರೀತಿಯ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಆರೋಗ್ಯ ಕಾಪಾಡಿಕೊಳ್ಳಲು ಈ ಎಲ್ಲಾ ಮಾಹಿತಿ ಅಗತ್ಯ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಬಾಲಕೃಷ್ಣ ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ