ಕಾರ್ಕಳ(ಜ.೨): ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯಲ್ಲಿ ಸರಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಯ ಆಸಕ್ತ ವಿದ್ಯಾರ್ಥಿಗಳಿಗೆ ಎನ್ ಎಂ ಎಂ ಎಸ್ ಪರೀಕ್ಷೆಯ ತರಬೇತಿ ಕೇಂದ್ರವನ್ನು ಕಾರ್ಕಳ ಶಿಕ್ಷಣ ಇಲಾಖೆಯು ಪ್ರಾರಂಭಿಸಿದೆ. ೪೦ ವಿದ್ಯಾರ್ಥಿಗಳು ಈ ಕೇಂದ್ರದಲ್ಲಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ನುಡಿಗಳ ಮೂಲಕ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ವೃಂದಾ ಶೆಣೈ . ಈ ತರಬೇತಿಯ ಸಂಪನ್ಮೂಲ ಶಿಕ್ಷಕರಾದ ಶ್ರೀ ದಿವ್ಯಾಕುಮಾರ್ ಸಂಪನ್ಮೂಲ ಶಿಕ್ಷಕಿ ಶ್ರೀಮತಿ ಶಂಕರಿ ಶಿಕ್ಷಣ ಸಂಯೋಜಕ ಶಿಕ್ಷಕ ಬಾಲಕೃಷ್ಣ ಶಿಕ್ಷಕ ಗಣೇಶ್ ಜಾಲ್ಸೂರು ಉಪಸ್ಥಿತರಿದ್ದರು. ಈ ಕೇಂದ್ರದಲ್ಲಿ ೪೦ ವಿದ್ಯಾರ್ಥಿಗಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಹಾಗೆಯೇ ತಾಲೂಕಿನ ಒಟ್ಟು ಇತರ ೬ ಕೇಂದ್ರಗಳಲ್ಲಿ ತರಬೇತಿ ನಡೆಯುತ್ತಿದೆ.
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ