ಉಡುಪಿ : ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರು ಈ ಲಾಕ್ ಡೌನ್ ಕ್ಲಿಷ್ಟಕರ ಸಮಯದಲ್ಲಿ ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೋವಿಡ್ ಮಹಾಮಾರಿಯಿಂದ ಅಮೂಲ್ಯ ಜೀವಗಳ ರಕ್ಷಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ನೀಡುತ್ತಿರುವ ವೈದ್ಯರು, ನರ್ಸಗಳು, ಆಶಾ ಕಾರ್ಯಕರ್ತೆಯರು, ಪೊಲೀಸರು, ಸೈನಿಕರು,ಗ್ರಾಮ ಪಂಚಾಯತ್, ನಗರಸಭಾ, ಪುರಸಭಾ ನೌಕರರು ಮತ್ತು ಸ್ವಚ್ಛತಾ ಸಿಬ್ಬಂದಿಗಳ ಸೇವೆ ಅಮೂಲ್ಯ ಎಂದು ಪರಿಗಣಿಸಿ, ಅವರ ಸೇವೆಯನ್ನು ಗುರುತಿಸಿ ಗೌರಹಿಸುವ ಉದ್ದೇಶದಿಂದ ಕೋವಿಡ್ ಜನಜಾಗ್ರತಿ ಪೋಸ್ಟರ್ಸ್ ಗಳನ್ನು ಮಾಡಿ ಉಡುಪಿ ಮತ್ತು ದಕ್ಷಿಣ ಕನ್ನಡದ ಗ್ರಾಮ ಪಂಚಾಯತ್, ಪುರಸಭೆ ಮತ್ತು ನಗರಸಭೆ ಗಳಲ್ಲಿ ಪ್ರಸಾರ ಮಾಡುವ ಕೆಲಸ ಮಾಡುತ್ತಿದೆ. ಈ ವಿಭಿನ್ನ ಪೋಸ್ಟರ್ ಡಿಸೈನ್ ನ್ನು ಬಿಡಿಸಿಕೊಟ್ಟವರು ಕೂಡ ಒಬ್ಬ ಕೋವಿಡ್ ವಾರಿಯರ್ ಡಾ. ಸ್ಫೂರ್ತಿ. (ಪ್ರಸ್ತುತ ಇವರು ವಿಕ್ಟೋರಿಯಾ ಆಸ್ಪತ್ರೆ ಬೆಂಗಳೂರಿನಲ್ಲಿ ಕೋವಿಡ್ ಡ್ಯೂಟಿ ಮಾಡುತಿದ್ದಾರೆ.).
ಇದರೊಂದಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಉತ್ತೇಜನ ನೀಡುವ ಸ್ಟಿಕರ್ ಗಳನ್ನು ಕೂಡ ಹಂಚಲಾಯಿತು. ಈ ಕಾರ್ಯದಲ್ಲಿ ಭಾರತೀಯ ವಿಕಾಸ ಟ್ರಸ್ಟಿನ ಸುಧೀರ್ ಕುಲಕರ್ಣಿ,ಶ್ರೀಕಾಂತ್ ಹೊಳ್ಳ, ಮನೋಹರ್ ಕಟ್ಗೆರಿ , ಅರುಣ್ ಪಾಠವರ್ಧನ್, ರಾಘವೇಂದ್ರ ಆಚಾರ್ ಮತ್ತು ಸುರೇಶ ಕುಲಾಲ್ ಭಾಗವಹಿಸಿದ್ದರು.
ಹೆಚ್ಚಿನ ಮಾಹಿತಿ ಹಾಗೂ ಸುದ್ದಿ ವಿವರಕ್ಕೆ ಹಾಗೂ ವಿಡಿಯೊ ನ್ಯೂಸ್ ವೀಕ್ಷಿಸಲು ಭಾವನ ಟಿವಿ ವೀಕ್ಷಿಸಿ. ಭಾವನ ಟಿವಿ ಇದು ನಿಮ್ಮ ವಾಹಿನಿ.
ಭಾವನಾ ಟಿವಿಯಲ್ಲಿ ಮತ್ತು ವೆಬ್ ಸೈಟ್ನಲ್ಲಿ ಜಾಹಿರಾತು ನೀಡಲು ಕರೆ ಮಾಡಿ, 9740723670, 9590906499
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ