April 26, 2024

Bhavana Tv

Its Your Channel

ಕಿರಿಮಂಜೇಶ್ವರ ಹೊಸಹಿತ್ಲು ಮರವಂತೆ ಕಡಲ ತೀರದ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಬೈಂದೂರು ; ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು, ಆದ್ರಗೋಳಿ ಹಾಗೂ ಮರವಂತೆಯ ಕಡಲ ತೀರದ ಪ್ರದೇಶಗಳ ಕಡಲ್ಕೊರೆತ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು.

ಮಳೆಗಾಲದ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ ನಮ್ಮ ಕರಾವಳಿಯಲ್ಲಿ ಪ್ರತಿ ವರ್ಷ ಕಡಲಕೊರೆತ ಜಾಸ್ತಿಯಾಗಿದೆ. ಕಳೆದ ವರ್ಷ ಚಂಡಮಾರುತ ಸಂಭವಿ ಹಲವಾರು ಮೀನುಗಾರರು ಸಂಕಷ್ಟವನ್ನು ಅನುಭವಿಸಿದರು. ಯಾವುದೇ ಒಂದು ಶಾಶ್ವತ ಪರಿಹಾರ ಇದುವರೆಗೂ ಕೂಡ ಅನುಷ್ಠಾನಗೊಂಡಿಲ್ಲ ಈ ಬಗ್ಗೆ ಅಧಿಕಾರಿಗಳು ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉದಯ ಕುಮಾರ್, ಶ್ರೀ ರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕೇಶ್ ಖಾರ್ವಿ, ಚಂದ್ರ ಕಾರ್ವಿ, ಅನಿತಾ ಆರ್ ಕೆ , ಶಂಕರ್ ಖಾರ್ವಿ, ಮೀನುಗಾರರ ಮುಖಂಡರು ಉಪಸ್ಥಿತರಿದ್ದರು. ವರದಿ : ಎಚ್ ಸುಶಾಂತ್ ಬೈಂದೂರು

error: