April 25, 2024

Bhavana Tv

Its Your Channel

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕಾರ್ಕಳ:- ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಜೀರ್ಣೋದ್ದಾರಗೊಂಡ ದೇವಸ್ಥಾನವನ್ನು ವೀಕ್ಷಿಸಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ರೂಪಾಯಿ ೧೦ ಲಕ್ಷಗಳ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಲಾಯಿತು. ಆಡಳಿತ ಮಂಡಳಿ ಮತ್ತು ಸಮಾಜ ಬಂಧುಗಳಿoದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ರಾವ್ ಜಾದವ್, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಶುಭದ ರಾವ್ ಪುರಸಭೆ ಮಾಜಿ ಸದಸ್ಯ ಪ್ರಕಾಶ್ ರಾವ್, ಕುಕ್ಕುಂದೂರು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಶ್ ರಾವ್, ಪುರಸಭೆ ಸದಸ್ಯರಾದ ಯೋಗೀಶ್ ದೇವಾಡಿಗ, ಅವಿನಾಶ್ ಶೆಟ್ಟಿ, ಸಂತೋಷ್ ರಾವ್ ಮತ್ತು ಮೊಕ್ತೇಸರರು ಹಾಗೂ ಸಮಾಜ ಬಂದುಗಳು ಉಪಸ್ಥಿತರಿದ್ದರು.

ವರದಿ ಅರುಣ ಭಟ್ಟ ಕಾರ್ಕಳ

error: