May 5, 2024

Bhavana Tv

Its Your Channel

ಬೃಹತ್ ರಕ್ತದಾನ ಶಿಬಿರ”

ಕಾರ್ಕಳ : ಜೇಸಿಐ ಕಾರ್ಕಳ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ, ಜನನಿ ಮಿತ್ರ ಮಂಡಳಿ (ರಿ)ವಾಂಟ್ರಾಯಿಪದವು, ರೋಟರಿ ಕ್ಲಬ್ ಕಾರ್ಕಳ, ಹಳೆ ವಿದ್ಯಾರ್ಥಿ ಸಂಘ ಕಲಂಬಾಡಿ ಪದವು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ ಪದವು ನಿಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆಯ ಚೇರ್ಮನ್ ಡಾ.ರಾಮಚಂದ್ರ ಜೋಷಿ ರಕ್ತದಾನದ ಬಗ್ಗೆ ಮಾಹಿತಿ ನೀಡುತ್ತಾ ಮುಂದಿನ ದಿನಗಳಲ್ಲಿ ಕಾರ್ಕಳ ಶಾಖೆಯ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಕಳ ತಾಲೂಕು ಕೇಂದ್ರದಲ್ಲಿ ರಕ್ತ ಸಂಗ್ರಹ ಘಟಕವನ್ನು ಸ್ಥಾಪಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಜೇಸಿಐ ಅಧ್ಯಕ್ಷ ಸಂತೋಷ್ ಕುಮಾರ್ ರೆಂಜಾಳ,ಜನನಿ ಮಿತ್ರ ಮಂಡಳಿ ಅಧ್ಯಕ್ಷ ಬಾಲಕೃಷ್ಣ, ಗೌರವಾಧ್ಯಕ್ಷ ಶ್ರೀಧರ ಸುವರ್ಣ, ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ನಾಯಕ್, ಬಿ.ಜೆ.ಪಿ.ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಮಾನಂದ ಪೂಜಾರಿ, ಉಡುಪಿ ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾ, ಮಹಿಳಾ ಮಂಡಳಿ ಉಪಾಧ್ಯಕ್ಷೆ ರಮಣಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮ ನಿರೂಪಿಸಿದ ಜೇಸಿಐ ದಿವಾಕರ ಬಂಗೇರಾ ಎಲ್ಲರನ್ನು ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ವಂದಿಸಿದರು.

error: