May 21, 2024

Bhavana Tv

Its Your Channel

ಕಾರ್ಕಳದಲ್ಲಿ ಕಾರ್ಮಿಕರಿಗೆ ಇಲಾಖಾ ವತಿಯಿಂದ ಆಹಾರ ಕಿಟ್ ವಿತರಣೆ

ಕರ್ನಾಟಕ ರಾಜ್ಯ ಸರಕಾರ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಶ್ರಮಿಕ ಬದುಕಿಗೆ ನೆರವಿನ ಆಸರೆ ಆಹಾರ ಕಿಟ್ ವಿತರಣೆ ಕಾರ್ಕಳ ಪುರಸಭೆಯ ವತಿಯಿಂದ ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಕಾರ್ಕಳ ಇಲ್ಲಿ ಜರುಗಿತು,

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸರಕಾರದ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದರು. ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಮಾಹಿತಿಯನ್ನು ನೀಡಿದರು.
ಸಭಾಧ್ಯಕ್ಷತೆಯನ್ನು ಪುರಸಭೆ ಉಪಾಧ್ಯಕ್ಷರಾದ ಪಲ್ಲವಿ ಪ್ರವೀಣ್ ವಹಿಸಿದ್ದರು,
ಕಾರ್ಮಿಕ ಇಲಾಖೆಯ ಅಧಿಕಾರಿ ಕುಮಾರ ಮಾತನಾಡಿದರು.
ಈ ಸಂದರ್ಭ ಮುಖ್ಯಅಧಿಕಾರಿ ರೂಪ ಟಿ ಶೆಟ್ಟಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ಟ ಕಾರ್ಕಳ

error: