ಕಾರ್ಕಳ ; ಶಾಸಕ ವಿ. ಸುನಿಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ದೊರಕಿರುವುದು ಸಮಸ್ತ ಕಾರ್ಕಳ ಜನತೆಗೆ ಹರ್ಷ ತಂದಿದೆ. ಅವರ ಅವಧಿಯಲ್ಲಿ ನಾಡು ಹಾಗೂ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳು ಆಗಲಿ ಎಂದು ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ್ ಕಾಮತ್ ಹೇಳಿದರು.
ಶಾಸಕ ಸುನೀಲ್ ಸಚಿವರಾಗಿ ಪ್ರಮಾನವಚನ ಸ್ವೀಕರಿಸುವ ಮೊದಲು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಬಿಬೆಪಿ ವತಿಯಿಂದ ಸಂಬ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ ಹರ್ಷ ವ್ಯಕ್ತ ಪಡಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ಹಾಗೂ ವಕೀಲರ ಎಂ ಕೆ ವಿಜಯಕುಮಾರ್ ಮಾತನಾಡಿ, ಸ್ವರ್ಣ ಕಾರ್ಕಳ, ಸ್ವಚ್ಚ ಕಾರ್ಕಳದ ಕನಸು ಕಂಡಿರುವ ಸುನಿಲ್ ಕುಮಾರ್ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಹಮ್ಮೆಯ ವಿಚಾರ. ಸಚಿವರಾಗಿ ಅವರು ಇನ್ನಷ್ಟು ಜನಪರ ಕೆಲಸ ಮಾಡುವಂತಾಗಲಿ ಎಂದು ಶುಭಹಾರೈಸಿದರು. ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ,ಟಿ.ಮಾಜಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಚಂದ್ರ ನಾಯಕ್, ಉದ್ಯಮಿ ರವಿಪ್ರಕಾಶ್ ಪ್ರಭು, ಕಾರ್ಕಳ ಪುರಸಭಾ ಉಪಾಧ್ಯಕ್ಷ ರಾದ ಪಲ್ಲವಿ ಪ್ರವೀಣ್ ಕಾರ್ಕಳ ತಾಲೂಕು ಯುವಮೋರ್ಚಾ ಅಧ್ಯಕ್ಷ ಮುಟ್ಲ ಪಾಡಿ ಸುಹಾಸ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.