April 30, 2024

Bhavana Tv

Its Your Channel

ಸಚಿವ ಸುನಿಲ್ ಕುಮಾರ್‌ವರಿಗೆ ಬೆಳ್ಮಣ್‌ನಲ್ಲಿ ಅದ್ದೂರಿ ಸ್ವಾಗತ.

ಕಾರ್ಕಳ: ಕರ್ನಾಟಕ ಸರಕಾರದ ನೂತನ ಮಂತ್ರಿಮAಡಲದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ಕಾರ್ಕಳಕ್ಕೆ ಆಗಮಿಸಿದಾಗ ಶುಕ್ರವಾರ ಬೆಳ್ಲಣ್ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಸಚಿವರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಸುರತ್ಕಲ್ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯಾನ್ ಬೆಳ್ಮಣ್ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ಶೆಟ್ಟಿ ಮುಲ್ಲಡ್ಕ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ ಜಿಲ್ಲಾ ಪಂಚಾಯತ್ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ಟ ಕಾರ್ಕಳ

error: