ವರದಿ:ಅರುಣ ಭಟ್ ಕಾರ್ಕಳ
ಬೆಳ್ತಂಗಡಿ ಲಾಯಿಲ ಗ್ರಾಮ ನಿವಾಸಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ರವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.೨೮ ರಂದು ವರದಿಯಾಗಿದೆ.
ಆಟೋ ಚಾಲಕರಾಗಿದ್ದ ಇವರು ಕಳೆದ ವರ್ಷ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮೂರಿತಕ್ಕೊಳಪಟ್ಟು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರು.
ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಇವರು ಶನಿವಾರ ಬೆಳಗ್ಗೆ ಲಾಯಿಲ ಗ್ರಾಮದ ಆದರ್ಶ ನಗರದ ಬಳಿ ಇರುವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಕಾರದಿಂದ ಮೃತ ದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.