ವರದಿ: ಅರುಣ ಭಟ್ ಕಾರ್ಕಳ
ಕಾರ್ಕಳ: ಬೆಳ್ಮಣ್ ,ನಂದಳಿಕೆ ಇನ್ನ , ಮುಂಡ್ಕೂರ್, ಗ್ರಾಮ ಪಂಚಾಯತ್ಗಳಿಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರ ಭೇಟಿ ನೀಡಿ ಜನಸ್ಪಂದನ ಸಭೆ ಶನಿವಾರ ನಡೆಯಿತು.
ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವರು ಕ್ಷೇತ್ರದಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು ಪರಿಹರಿಸಲಾಗುವುದು. ಇಲಾಖೆಗಳ ಸವಲತ್ತುಗಳು ಜನರಿಗೆ ಕೈಗೆಟಕುವಂತೆ ಇರಬೇಕು . ಇಲಾಖೆಗಳಲ್ಲಿ ಹೊಸತನ ನಿರ್ಮಾಣವೇ ನನ್ನ ಮುಖ್ಯ ಗುರಿ. ಕಾರ್ಕಳ ಕ್ಷೇತ್ರದ ಯಾವುದೇ ಗ್ರಾಮದಲ್ಲಿಯೂ ವಿದ್ಯುತ್ ಸಮಸ್ಯೆ ಇರಬಾರದು, ಲೋವೋಲ್ಟೇಜ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಅಗತ್ಯವಿದ್ದಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಸುವ ಕುರಿತು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಚಿವನಾದ ಮೇಲೆ ನಾನು ಜನರಿಗೆ ಸಿಗುವುದಿಲ್ಲ ಎನ್ನುವ ಭಾವನೆ ಬೇಡ ನಮ್ಮ ಕಚೇರಿ ಹಾಗೂ ನಮ್ಮ ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಸದಾ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂದರು.
ವೇದಿಕೆಯಲ್ಲಿ ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್ ಗೇರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿ ರಾಜ್ ಶೆಟ್ಟಿ ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ ಶೆಟ್ಟಿ ಇನ್ಸ್ಪೆಕ್ಟರ್ ಸಂಪತ್ ಕುಮಾರ್ ತಾಲೂಕು ಕಾರ್ಯನಿರ್ವಹಣಾಧಿಕಾರಿ ಗುರು ದತ್ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು .
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.