May 22, 2024

Bhavana Tv

Its Your Channel

ಕೋವಿಡ್‌ ವೈರಸನ್ನು ಭಾರೀ ದೊಡ್ಡ ಕಾಯಿಲೆ ತರ ಬಿಂಬಿಸಿ ಜನರು ತತ್ತರಿಸಿ ಹೋಗುವ ಹಾಗೆ ಮಾಡಿದ್ದಾರೆ : ಮಂಜುನಾಥ ಪೂಜಾರಿ.

ಹೆಬ್ರಿ : ಸಾಮಾನ್ಯ ಜ್ವರದಂತಹ ಕೊವೀಡ್ ವೈರಸನ್ನು ಭಾರೀ ದೊಡ್ಡ ಕಾಯಿಲೆ ತರ ಬಿಂಬಿಸಿ ಜನರನ್ನು ಬಲಿಪಡೆಯುವ ಜೊತೆಗೆ ಜನರು ತತ್ತರಿಸಿ ಹೋಗುವ ಹಾಗೇ ಮಾಡಿದ್ದಾರೆ. ಜನರನ್ನು ಕೇಳುವವರೇ ಇಲ್ಲ. ಸಾಮಾನ್ಯ ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೊಂದು ನ್ಯಾಯ. ಬಡವರನ್ನು ಕೇಳುವವರೇ ಇಲ್ಲ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ದೂರಿದರು.

ಅವರು ಇಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿದರು.

ಪೆಟ್ರೋಲ್ ಡಿಸೇಲ್ ಗ್ಯಾಸ್ ಬೆಲೆ ದಿನದಿನ ಏರಿಕೆಯಾಗುತ್ತಿದೆ. ಅಚ್ಚೇದಿನ್ ಅಂದರೆ ಇದೆನಾ ಎಂದು ಮಂಜುನಾಥ ಪೂಜಾರಿ ಪ್ರಶ್ನಿಸಿದರು.

ಅಂದಿನಿAದ ಇಂದಿನವರೆಗೂ ಕಾಂಗ್ರೆಸ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ. ಈಗ ಅವೆಲ್ಲವನ್ನು ಈಗ ಬಿಜೆಪಿಯವರು ಮಾರಾಟ ಮಾಡುತ್ತ ಕಾಂಗ್ರೆಸ್ ದೇಶಕ್ಕೆ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ ಎಂದು ಮಂಜುನಾಥ ಪೂಜಾರಿ ಹೇಳಿದರು.

ಕೊರೋನ ಸಂಕಷ್ಟದ ನಡುವೆ ಆರ್ಥಿಕ ಕುಸಿತವಾಗಿದೆ. ಲಾಕ್ ಡೌನ್ ನಿಂದಾಗಿ ಕೋಟ್ಯಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಸಮಸ್ಯೆಯನ್ನು ಸರಿ ಮಾಡುವ ಬದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಂಜುನಾಥ ಪೂಜಾರಿ ಹೇಳಿದರು.
ಸರ್ಕಾರದ ಮಂತ್ರಿಗಳು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಲಾಕ್ ಡೌನ್, ವಾರಾಂತ್ಯದ ಕರ್ಪ್ಯೂ ಹೇರಿಕೆ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಗೆ ಕರ್ಪ್ಯೂ ಅಗತ್ಯ ಇಲ್ಲ ಎಂದರು.

ನೂತನ ಡಿಸಿ ಶಿಕ್ಷಣದ ಬಗ್ಗೆ ಗಮನ ನೀಡಲಿ : ಉಡುಪಿಯ ನೂತನ ಜಿಲ್ಲಾಧಿಕಾರಿಯವರು ಮಕ್ಕಳ ಶಿಕ್ಷಣದ ಬಗ್ಗೆ ವಿಶೇಷವಾದ ಗಮನ ನೀಡಲಿ.ಶಾಲೆಗಳು ಆರಂಭವಾಗುತ್ತಿವೆ. ಮಕ್ಕಳಿಗೆ ಶಾಲೆಗೆ ಹೋಗಲು ಸರಿಯಾಗಿ ಬಸ್ ಸೌಕರ್ಯವಿಲ್ಲ. ಈ ಬಗ್ಗೆ ಡಿಸಿ ಗಮನಿಸಿ ಕ್ರಮ ಕೈಗೊಳ್ಳಲಿ ಎಂದು ಮಂಜುನಾಥ್ ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಲಕ್ಷ್ಮಣ ಆಚಾರ್ಯ, ಕಾರ್ಯದರ್ಶಿ ಅಶ್ವಿನಿ ಮುದ್ರಾಡಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ ಶೆಟ್ಟಿ, ಪ್ರಮುಖರಾದ ಬಲ್ಲೆಮನೆ ಸುಧಾಕರ ಶೆಟ್ಟಿ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: