April 25, 2024

Bhavana Tv

Its Your Channel

ಕಾರ್ಕಳ; ಕಾನೂನು ಅರಿವು -ನೆರವು ಕಾರ್ಯಕ್ರಮ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ ಕಾರ್ಕಳ ಮತ್ತು ಗ್ರಾಮ ಪಂಚಾಯತ್ ದುರ್ಗ ಇವರ ಸಂಯುಕ್ತ ಆಶ್ರಮದಲ್ಲಿ ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಉಚಿತ ಕಾನೂನು ಅರಿವು -ನೆರವು ಕಾರ್ಯಕ್ರಮವು ದುರ್ಗ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಸತೀಶ್ ನಾಯಕ್ ರವರು ವಹಿಸಿದ್ದರು.ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಪಂಚಾಯತ್ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ನಡೆದಾಗ ಮಾತ್ರ ಸಾಮಾನ್ಯ ಜನರಿಗೂ ಉಚಿತವಾಗಿ ಕಾನೂನಿನ ಬಗ್ಗೆ ಮಾಹಿತಿಗಳು ಲಭಿಸುತ್ತದೆ. ಇದೊಂದು ಉಪಯುಕ್ತ ಕಾರ್ಯಕ್ರಮ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನ್ಯಾಯವಾದಿಗಳಾದ ಸನತ್ ಕುಮಾರ್ ಜೈನ್ ರವರು “ಆಸ್ತಿಗಳ ಹಕ್ಕು ಬಗ್ಗೆ ವಿವರವಾಗಿ ತಿಳಿಸಿದರು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಸುಶೀಲ ಮತ್ತು ಇನ್ನೊರ್ವ ನ್ಯಾಯವಾದಿಯಾದ ಕುಮಾರಿ ಸುಮಲತಾ ರವರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಮತ್ತು ಗ್ರಾಮಸ್ಥರು ಹಾಜರಿದ್ದರು. ಅಭಿವೃದ್ಧಿ ಅಧಿಕಾರಿ ವಿದ್ಯಾ ಪಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವರದಿ: ಅರುಣ ಭಟ್ ಕಾರ್ಕಳ

error: