May 19, 2024

Bhavana Tv

Its Your Channel

ಯೂತ್ ಫಾರ್ ಸೇವಾ ವತಿಯಿಂದ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಯೂತ್ ಫಾರ್ ಸೇವಾ ವತಿಯಿಂದ ಶಾಲೆಯ ೬ ಮತ್ತು ೭ನೇ ತರಗತಿಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಲೇಖನ ಪರಿಕರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಉಷಾ ತಮಂಕರ್ ಅವರು ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಪದಾಧಿಕಾರಿಗಳು ಆಗಿರುವ ಸಮಾಜ ಸೇವಕಿ ರಮಿತಾ ಶೈಲೇಂದ್ರ ಮತ್ತು ಗಣೇಶ್ ಸಾಲ್ಯಾನ್, ಸಾಣೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಕರುಣಾಕರ ಕೋಟ್ಯಾನ್, ಕಾರ್ಕಳ ಶಿಕ್ಷಣ ಇಲಾಖೆಯ ಬಿ. ಆರ್. ಪಿ. ಸಂತೋಷ್ ಶೆಟ್ಟಿ ಎಸ್ಡಿಎಂಸಿ ಅಧ್ಯಕ್ಷೆ ಜಯಶ್ರೀ ದೇವಾಡಿಗ ನಿಕಟಪೂರ್ವ ಅಧ್ಯಕ್ಷರು ಸೋಮನಾಥ ಮತ್ತು ಶಿಕ್ಷಕ ವೃಂದ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೇಹಗಳಲ್ಲಿ ಒಂದಾದ ಸಮಾಜಸೇವೆ ಮಾಡುವ ಮನೋಭಾವನೆಯನ್ನು ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ನಿರ್ಮಲ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

ವರದಿ: ಅರುಣ ಭಟ್ ಕಾರ್ಕಳ

error: