May 10, 2024

Bhavana Tv

Its Your Channel

ಕಾರ್ಕಳ ದಾನ ಶಾಲೆ ಕಾಲೋನಿಗೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ ಸಚಿವ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ಶಾಸಕ, ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಹಾಗೂ ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ರವರು ಪುರಸಭೆ ವ್ಯಾಪ್ತಿಯ ಕಾಲೋನಿಗಳ ಅಭಿವೃದ್ಧಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಧಿಯಿಂದ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಕಾರ್ಕಳ ದಾನ ಶಾಲೆ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಬೇಕು. ಇನ್ನು ಈ ಕಾಲೋನಿ ಗೆ ಹೋಗುವ ರಸ್ತೆ ಕಾಂಕ್ರೀಟಿಕರಣ ಆಗಬೇಕು, ಚರಂಡಿ ವ್ಯವಸ್ಥೆ ಆಗಬೇಕು ಕಾರ್ಕಳ ತಾಲೂಕಿನ ಇಂತಹ ಎಲ್ಲ ಕಾಲೋನಿ ಎಲ್ಲೆಲ್ಲಿವೆ ಅದು ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾ ಕೇಶವ ಪುರಸಭೆ ಮುಖ್ಯಧಿಕಾರಿ ರೂಪ ಶೆಟ್ಟಿ, ಪುರ ಸಭೆ ಸದಸ್ಯರಾದ ವಿನ್ನಿಬೋಲ್ಡ್, ಯೋಗೀಶ ದೇವಾಡಿಗ, ಪ್ರದೀಪ್ ರಾನೆ, ಭಾರತಿ, ಪ್ರಸನ್ನ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: